Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯತ್ನಾಳನನ್ನು ಮತ್ತೇ ಬಿಜೆಪಿಗೆ ಕರೆ ತರುವೆ:  ಶಾಸಕ ರಮೇಶ್ ಜಾರಕಿಹೊಳಿ

Advertisement
 

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷಕ್ಕೆ ಮರಳಿ ಕರೆ ತರುತ್ತೇನೆಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ: ಜಿಲ್ಲೆಯ ರಾಮದುರ್ಗ ಪಟ್ಟಣದ ಹೊರ ವಲಯದಲ್ಲಿರುವ ನಟರಾಜ ಸಭಾ ಭವನದಲ್ಲಿ ಶನಿವಾರ ಜರುಗಿದ ಬಿಜೆಪಿ ರಾಮದುರ್ಗ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ನಂತರ ಮಾತನಾಡಿದ ಅವರು “ಮುಂದಿನ ದಿನಗಳಲ್ಲಿ ಎಲ್ಲ ಭಿನ್ನಾಭಿಪ್ರಾಯಗಳನ್ನು ದೂರಮಾಡಿ ಕೆಳ ಹಂತದಿಂದ ಪಕ್ಷವನ್ನು ಕಟ್ಟಿ ನಮ್ಮೆಲ್ಲ ನಾಯಕರನ್ನು ಒಟ್ಟುಗೂಡಿಸಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ.

ಏಪ್ರಿಲ್ 9 ರಂದು ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಉಪಚುನಾವಣೆ ನಡೆಯಲ್ಲಿದ್ದು ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆಂದು ವಿಶ್ವಾಸವಿದೆ. ನಾನೂ ಕೂಡ ನಾಳೆ ದಾವಣಗೆರೆಗೆ ನಾಡಿದ್ದು ಬಾಗಲಕೋಟೆಗೆ ಪ್ರಚಾರ ಕಾರ್ಯಕ್ಕಾಗಿ ಹೋಗುತ್ತಿದ್ದೇನೆ.



ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪಕ್ಷಕ್ಕೆ ಮರಳಿ ಬಂದರೆ ನಾವು ಸ್ವಾಗತಿಸುತ್ತೇವೆ. ಯತ್ನಾಳ ಅವರು ಉಚ್ಛಾಟಿತರಾದ ಮರುದಿನದಿಂದಲೇ ನಾನು ಅವರನ್ನು ಬಿಜೆಪಿ ಪಕ್ಷಕ್ಕೆ ಮರಳಿ ಕರೆ ತರುವ ಪ್ರಯತ್ನ ಮಾಡುತ್ತಿದ್ದೇನೆ. ಕೊನೆಯಲ್ಲಿ ನಮ್ಮ ಪಕ್ಷದ ಹೈ ಕಮಾಂಡ್ ಏನು ತಿರ್ಮಾನ ತೆಗೆದು ಕೊಳ್ಳುತ್ತದೆ ನೋಡೋಣ” ಎಂದು ಹೇಳಿದರು.

ಬಿಜೆಪಿ ರಾಮದುರ್ಗ ಮಂಡಲದ ತಾಲೂಕಾಧ್ಯಕ್ಷ ಕೆ ವಿ ಪಾಟೀಲ ಮಾತನಾಡಿದ ನೂತನವಾಗಿ ಜವಾಬ್ದಾರಿ ವಹಿಸಿಕೊಂಡಿರುವ ಎಲ್ಲಾ ಪದಾಧಿಕಾರಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅಧಿಕಾರ ಅನ್ನೋದು ಕೇವಲ ಒಂದು ಸ್ಥಾನವಲ್ಲ, ಅದೊಂದು ದೊಡ್ಡ ಜವಾಬ್ದಾರಿ ಅನ್ನೋದನ್ನು ನೀವು ಮರೆಯಬಾರದು.

ಸುಮ್ಮನೆ ಪದವಿ ಸಿಕ್ಕಿತು ಅಂತ ಮನೆಯಲ್ಲಿ ಕೂರಬಾರದು. ಹಳ್ಳಿ-ಹಳ್ಳಿಗಳಿಗೆ ಹೋಗಿ, ಜನರ ಸಮಸ್ಯೆಗಳನ್ನು ಕೇಳಿ. ನಮ್ಮ ಸಿದ್ಧಾಂತ ಏನು? ನಮ್ಮ ಗುರಿ ಏನು? ಅನ್ನೋದನ್ನು ಜನರಿಗೆ ಮುಟ್ಟಿಸಿ. ನೀವು ಎಷ್ಟು ಸಕ್ರಿಯವಾಗಿ ಇರುತ್ತೀರೋ, ಅಷ್ಟು ನಮ್ಮ ಸಂಘಟನೆಗೆ ಶಕ್ತಿ ಬರುತ್ತದೆ."

ಈ ಸಂಧರ್ಭ ಬಿಜೆಪಿ ಜಿಲ್ಲಾ ಹಾಗೂ ತಾಲೂಕಾ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಮಂಜುನಾಥ ಕಲಾದಗಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ