Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಹುದ್ದೆಗೆ ಕೂಡಲೇ ಮೋದಿ ರಾಜೀನಾಮೆ ನೀಡಬೇಕು : ಸಿದ್ದರಾಮಯ್ಯ

Advertisement
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು ಎನ್ನುವುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಬಿಡುಗಡೆ ಮಾಡಿರುವ ದಾಖಲೆಗಳು ಸಾಕ್ಷಿ ಎಂದು ತಿಳಿಸಿದ್ದಾರೆ.

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸರ್ಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲಾ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ.

ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ದಾಖಲೆಗಳನ್ನು ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸುದೀರ್ಘ 6 ತಿಂಗಳ ಕಾಲ ಹಲವು ಮಂದಿ ಅಧ್ಯಯನ ನಡೆಸಿ, ಮತಗಳ್ಳತನದ ಇಂಚಿಂಚೂ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಕೇವಲ ಮೂರೂವರೆ ಲಕ್ಷ ಮತದಾರರಿರುವ ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷದ 250 ಮತಗಳನ್ನು ಅಕ್ರಮವಾಗಿ ಪಡೆದುಕೊಂಡು ಚುನಾವಣೆಯಲ್ಲಿ ಜಯಿಸಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 5 ರೀತಿಯಲ್ಲಿ ಚುನಾವಣಾ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ