LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ : 150ಕ್ಕೂ ಅಧಿಕ ಕಂಪನಿಗಳು ಭಾಗಿ

Advertisement

ಉತ್ತರ ಕರ್ನಾಟಕ ಭಾಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿ ಒಂದಿದೆ. ವಿಜಯಪುರದಲ್ಲಿ ಫೆಬ್ರವರಿ ತಿಂಗಳಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 150ಕ್ಕೂ ಅಧಿಕ ಕಂಪನಿಗಳು ಭಾಗವಹಿಸುತ್ತಿದ್ದು, ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ.


ಉತ್ತರ ಕರ್ನಾಟಕ ಭಾಗದ ಯುವನಿಧಿ ಫಲಾನುಭವಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ನಿರುದ್ಯೋಗ ಯುವಕ/ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಸಚಿವರ ನೇತೃತ್ವದಲ್ಲಿ ಈ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ದಿನಾಂಕ ಮತ್ತು ಸ್ಥಳದ ವಿವರ: ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿನ ದರಬಾರ ಸ್ಕೂಲ್ ಆವರಣದಲ್ಲಿ ಫೆಬ್ರವರಿ 2ರ ಬೆಳಗ್ಗ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಯುವ ಸಮೃದ್ಧಿ ಹಾಗೂ ಉದ್ಯೋಗ ಮೇಳದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಭಾಗದ ಜಿಲ್ಲೆಗಳ ಅಭ್ಯರ್ಥಿಗಳನ್ನು ಒಳಗೊಂಡಂತೆ ಇತರೆ ಜಿಲ್ಲೆಗಳಿಂದಲೂ ಸಹ ಅಂದಾಜು 20,000ಕ್ಕೂ ಅಧಿಕ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ.

150ಕ್ಕೂ ಹೆಚ್ಚು ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗ ಯುವಕ/ ಯುವತಿಯರು ವಿಭಾಗೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಈ ಉದ್ಯೋಗ ಮೇಳವು ಉದ್ಯೋಗಾಕಾಂಕ್ಷಿಗಳನ್ನು ಹಾಗೂ ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನವಾಗಿದೆ.

ಉದ್ಯೋಗದಾತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅವರ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಉದ್ಯೋಗಗಳಿಗೆ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಉದ್ಯೋಗಾಕಾಂಕ್ಷಿ ಯುವಕ/ ಯುವತಿಯರು ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿರುತ್ತದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳ ನೋಂದಣಿಗೆ ಲಿಂಕ್ hhttps://udyogamela.ksdckarnataka.com. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗದಾತರು/ ಕಂಪನಿಗಳು ಸಹ ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರಗಳೊಂದಿಗೆ hhttps://employer.ksdckarnataka.com/login ಈ ಜಾಲತಾಣದಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9606494308ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ