LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಐವಿಎಫ್ ಮೂಲಕ ಜನ್ಮ ನೀಡಿದ ಅವಳಿ ಶಿಶು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

Advertisement

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿ ತನ್ನ ನಾಲ್ಕು ತಿಂಗಳ ಅವಳಿ ಹೆಣ್ಣು ಶಿಶುಗಳನ್ನು ನೀರಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.

ವಾಜರಹಳ್ಳಿಯ ಬಿಸಿಸಿಎಚ್‌ಎಸ್ ಲೇಔಟ್ ನಿವಾಸಿ ರಾಮಲಿಂಗಪ್ಪ ದಂಪತಿ ಮಕ್ಕಳು ಕೊಲೆಯಾಗಿದ್ದಾರೆ.ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅವರ ಪತ್ನಿ ಉಮಾದೇವಿ ಅವರನ್ನು ರಕ್ಷಿಸಿ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮನೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ಉಮಾದೇವಿಗೆ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ರಾಮಲಿಂಗಪ್ಪ ಅವರಿಗೆ ಹತ್ತು ವರ್ಷಗಳ ಹಿಂದೆ ಉಮಾದೇವಿ ಜೊತೆಗೆ ಮದುವೆಯಾಗಿದ್ದು, ಮದುವೆ ನಂತರ ದಂಪತಿಗೆ ಸಂತಾನವಾಗಿರಲಿಲ್ಲ. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಐವಿಎಫ್ ಮೂಲಕ ಇಬ್ಬರು ಹೆಣ್ಣುಮಕ್ಕಳಿಗೆ ಉಮಾದೇವಿ ಜನ್ಮ ನೀಡಿದ್ದರು.

ಹೆರಿಗೆ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮಕ್ಕಳ ಬಗ್ಗೆ ನಿರಾಸಕ್ತಿ ತೋರಿಸುತ್ತಿದ್ದರು. ಅಸಹಜವಾಗಿ ವರ್ತಿಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳವಾರ ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ತಲಘಟ್ಟಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐವಿಎಫ್ ಮೂಲಕ ಜನ್ಮ ನೀಡಿದ ಅವಳಿ ಶಿಶು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಬೆಂಗಳೂರಿನಲ್ಲಿ 31 ಬಾಂಗ್ಲಾ ಪ್ರಜೆಗಳು ಗಡಿಪಾರುಎಸ್ಸೆಸ್ಸೆಲ್ಸಿ ಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ 50 ಸಾವಿರ ರೂ. ನಗದು ಬಹುಮಾನ : ಮಧು ಬಂಗಾರಪ್ಪ ದಕ್ಷಿಣ ಆಪ್ರಿಕಾಗೆ 43 ರನ್ ಗಳ ಸುಲಭ ಜಯಉತ್ತರ ವಲಯ ತಂಡಕ್ಕೆ 139 ರನ್ ಗಳ ಲೀಡ್ಶಿವಾನಂದ ತಗಡೂರು ರಾಜಿನಾಮೆ, ಸಮಗ್ರ ತನಿಗೆ ಒತ್ತಾಯ ಮುಂಬೈ ಇಂಡಿಯನ್ಸ್ ತರಬೇತುದರರಾಗಿ ಜಯವರ್ಧನೆ ಮುಂದುವರಿಕೆ ತಂಡಕ್ಕೆ ಮರಳಿದ ಬುಮ್ರಾ: ನಾಯಕನಾಗಿ ಅಯ್ಯರ ಮುಂದುವರಿಕೆ ಅಂಗವಿಕಲರ ವೇತನಕ್ಕೆ ಲಂಚಕ್ಕೆ ಬೇಡಿಕೆ : ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು ಶಿಕ್ಷೆ, ₹40 ಸಾವಿರ ದಂಡಒಕ್ಕಲಿಗ ವಿದ್ಯಾರ್ಥಿಗಳಿಗೆ ಪುರಸ್ಕಾರ / ಮಠದ ಮೆಡಿಕಲ್ ಕಾಲೇಜಿನಲ್ಲಿ “ಭಕ್ತ, ಜಾತಿ, ಅಭಿಮಾನಿ" ಕೋಟಾ ಇಲ್ಲ:   ಪ್ರಸನ್ನನಾಥ ಶ್ರೀಗಳು