ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿ ತನ್ನ ನಾಲ್ಕು ತಿಂಗಳ ಅವಳಿ ಹೆಣ್ಣು ಶಿಶುಗಳನ್ನು ನೀರಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.
ವಾಜರಹಳ್ಳಿಯ ಬಿಸಿಸಿಎಚ್ಎಸ್ ಲೇಔಟ್ ನಿವಾಸಿ ರಾಮಲಿಂಗಪ್ಪ ದಂಪತಿ ಮಕ್ಕಳು ಕೊಲೆಯಾಗಿದ್ದಾರೆ.ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅವರ ಪತ್ನಿ ಉಮಾದೇವಿ ಅವರನ್ನು ರಕ್ಷಿಸಿ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮನೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ಉಮಾದೇವಿಗೆ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ರಾಮಲಿಂಗಪ್ಪ ಅವರಿಗೆ ಹತ್ತು ವರ್ಷಗಳ ಹಿಂದೆ ಉಮಾದೇವಿ ಜೊತೆಗೆ ಮದುವೆಯಾಗಿದ್ದು, ಮದುವೆ ನಂತರ ದಂಪತಿಗೆ ಸಂತಾನವಾಗಿರಲಿಲ್ಲ. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಐವಿಎಫ್ ಮೂಲಕ ಇಬ್ಬರು ಹೆಣ್ಣುಮಕ್ಕಳಿಗೆ ಉಮಾದೇವಿ ಜನ್ಮ ನೀಡಿದ್ದರು.
ಹೆರಿಗೆ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮಕ್ಕಳ ಬಗ್ಗೆ ನಿರಾಸಕ್ತಿ ತೋರಿಸುತ್ತಿದ್ದರು. ಅಸಹಜವಾಗಿ ವರ್ತಿಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳವಾರ ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ತಲಘಟ್ಟಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


