Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಮಕ್ಕಳ ಬೆಳವಣಿಗೆಯತ್ತ ತಾಯಂದಿರ ಗಮನ ಅಗತ್ಯ:ಶಾಸಕಿ ಜೊಲ್ಲೆ

Advertisement
ಅಂಗನವಾಡಿ ಮಕ್ಕಳ ಬೆಳವಣಿಗೆಯತ್ತ ತಾಯಂದಿರ ಗಮನ ಅಗತ್ಯ,ಭೋಜದಲ್ಲಿ ಪೋಷಣೆ ಅಭಿಯಾನ ಯೋಜನೆಗೆ ಚಾಲನೆ ನೀಡಿ ಶಾಸಕಿ ಜೊಲ್ಲೆ ಅಭಿಮತ

ನಿಪ್ಪಾಣಿ :ಮಕ್ಕಳಿಗೆ ಪಠ್ಯಪುಸ್ತಕದ ಶಿಕ್ಷಣದ ಜೊತೆಗೆ ಟಿವಿ ಮಾಧ್ಯಮದಿಂದ ಕಲಿಕೆಗೆ ಒತ್ತು ನೀಡುವುದಕ್ಕಾಗಿ ನಿಪ್ಪಾಣಿ ಮತಕ್ಷೇತ್ರದಲ್ಲಿ ಯ 66 ಅಂಗನವಾಡಿ ಶಾಲೆಗಳಲ್ಲಿ ಎಲ್. ಈ.ಡಿ ಅಳವಡಿಸಲು ಮಂಜೂರಿ ಪಡೆಯಲಾಗಿದ್ದು ಇದರ ಮೊದಲ ಹಂತವಾಗಿ 30ಅಂಗನವಾಡಿಗಳಿಗೆ ಟಿ. ವಿ ಹಂಚಲಾಗುತ್ತಿದೆ ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು.



ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಸರಕಾರಿ ಹಿರಿಯ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಪೋಷಣೆ ಅಭಿಯಾನ ಮಾಸಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಚಂದನ್ ಮುರಾಬಟ್ಟೆ, ಮಯೂರಿ ಮೋಹಿತೆ, CDPO ಸುಪ್ರಿಯಾ ಜಡಗೆ ಹಾಗೂ ಗಣ್ಯರ ಮುಖ್ಯ ಉಪಸ್ಥಿತಿಯಲ್ಲಿ ರಿಬ್ಬನ್ ಕಟ್ ಮಾಡಿ ಟಿವಿಗೆ ಚಾಲನೆ ನೀಡಿದರು.ಇದಕ್ಕೂ ಮೊದಲು ಅಂಗನವಾಡಿ ಮಕ್ಕಳಿಂದ ಹಾಡು, ಅಕ್ಷರ ಜ್ಞಾನ ಅಳಿಸಿ ಚಾಕ್ಲೆಟ್ ನೀಡಿ ಅಭಿನಂದಿಸಿದರು.



ತದನಂತರ ವೇದಿಕೆಯಲ್ಲಿಯ ಗಣ್ಯರ ಉಪಸ್ಥಿತಿಯಲ್ಲಿ ದೀಪ ಬೆಳಗಿದರು. ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತಿಕೆ, ಬಾಣಂತಿಯರಿಗೆ, ಹಾಗೂ ಚಿಕ್ಕಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ತಾಯಂದಿರರಿಗೆ ಅದರ ಮಹತ್ವ ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ. ಸುದರ್ಶನ್ ಮುರಾಬಟ್ಟೆ, ವಿನೋದ ಸಂಕಪಾಳ, ಪ್ರಶಾಂತ್ ಪಾಟೀಲ, ಸಂತೋಷ ಚವಾಣ, ನೀತಿನ ಮಿರಜೆ, ಗ್ರಾಮ ಪಂಚಾಯತಿ ಸದಸ್ಯರು ಅಂಗನವಾಡಿ ಮೇಲ್ವಿಚಾರಕರು ಉಪಸ್ಥಿತರಿದ್ದರು. ಎಸಿಡಿಪಿಓ ಜಯಶ್ರೀ ಕೌಜಲಗಿ ನಿರೂಪಿಸಿ ವಂದಿಸಿದರು.

ವರದಿ:ಮಹಾವೀರ ಚಿಂಚಣೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ