LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪ್ರೇರಣಾ ಕಾರ್ಯಾಗಾರ

Advertisement

ಬೈಲಹೊಂಗಲ : ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಲಹೊಂಗಲ ಪಟ್ಟಣದ ಖ್ಯಾತ ವೈದ್ಯರಾದ ಡಾ. ಮಹಾಂತೇಶ ನಂದಿಹಳ್ಳಿ ಮಾತನಾಡಿ  ಬದುಕಿನಲ್ಲಿ ಸಾಧನೆ ಮಾಡಬೇಕಾದರೆ ಬಾಹ್ಯ ಪ್ರೇರಣೆಗಿಂತ ಆಂತರಿಕ ಪ್ರೇರಣೆ ಬಹಳ ಮುಖ್ಯ ಎಂದರು. ವಿದ್ಯಾರ್ಥಿಗಳ ಸತತ ಪ್ರಯತ್ನ ಯಶಸ್ಸಿನ ಕೀಲಿ ಕೈ. ಕಲಿಯುವ ವಯಸ್ಸಿನಲ್ಲಿ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಮುಂದೆ ಉತ್ತಮ ಜೀವನ ಸಾಗಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.

news_1786005296_0_445.webp

 

ಜಂಕ್ ಪುಡ್ ತಿನ್ನುವುದನ್ನು ಬಿಟ್ಟು ಪೌಷ್ಟಿಕಾಂಶಯುಳ್ಳ ಆಹಾರ ಸೇವಿಸುವುದನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಯೋಗ, ಧ್ಯಾನ ಏಕಾಗ್ರತೆ ಹೆಚ್ಚಿಸಿ ಉತ್ತಮ‌ ಅಂಕಗಳನ್ನು ಪಡೆಯಲು ಸಹಕಾರಿ ಎಂದು ಅವರು ಹೇಳಿದರು. ಇನ್ನೋರ್ವ ಮುಖ್ಯ ಅತಿಥಿಗಳಾದ ಅಶೋಕ‌ ನಂದಿಹಳ್ಳಿ ಮಾತನಾಡಿ ಉತ್ತಮ ಶಿಕ್ಷಣ ಬಾಳಿಗೆ ಬೆಳಕು ನೀಡುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಮಾತನಾಡಿ ವಿದ್ಯಾರ್ಥಿಗಳು ಕ್ರಿಯಾಶೀಲತೆ ಹಾಗೂ ಶಿಸ್ತನ್ನು ಅಳವಡಿಸಿಕೊಂಡರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಬಹುದು ಎಂದರು. 

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜೆ.ಆರ್.ನರಿ, ಪಿ.ಎಸ್.ಗುರುನಗೌಡರ, ಎಚ್.ವಿ.ಪುರಾಣಿಕ, ವಿ.ಆಯ್. ಕೋಟಗಾರ, ಜಿ.ಬಿ. ತುರಾದಿ, ಎ.ಎಂ. ಬೇಪಾರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾವೇರಿ ಬೋಬಡೆ ಸ್ವಾಗತಿಸಿದರು. ವಿದ್ಯಾ ಗರಗದ ನಿರೂಪಿಸಿದರು. ಚನಬಸವ್ವ ಸೊಗಲದ ವಂದಿಸಿದರು.

ವರದಿ : ದುಂಡಪ್ಪ ಹೂಲಿ     

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ. ೫ ರಂದು ಭಾರತ- ಪಾಕಿಸ್ತಾನ ಪಂದ್ಯಮುಂಬೈಯಲ್ಲಿ ನಿರ್ಮಾಣವಾಗಿದೆ ನಟಿ ನಗ್ಮಾ ಮಿರಜಕರ ಕನಸಿನ ಮನೆಶ್ರೀ ವೆಂಕಟೇಶ್ವರ ಪ್ರೌಢ ಶಾಲೆಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭಸ್ನ್ಯಾಪ್‌ಚಾಟ್‌'ಗೆ ಕಾಲಿಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯಕಾಕ್ರೋಚ್ ಜನತಾ ಪಾರ್ಟಿಯಿಂದ ದೇಶಾದ್ಯಂತ ಕ್ಯಾ ಬೋಲ್ತಿ ಪಬ್ಲಿಕ್ ಅಭಿಯಾನ ಘೋಷಣೆತೆರಿಗೆ ಮತ್ತು ಇತರ ಕಾನೂನು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ8 ಕಾಲು, ಮೂರು ಕಿವಿ, ಎರಡು ಬಾಲ ಮತ್ತು ಎರಡು ನಾಲಿಗೆ ಉಳ್ಳ ಆಡು ಮರಿ ಜನನನಾನು ಡಿ.ಕೆ. ಶಿವಕುಮಾರ್ ಅವರ ಮನೆಮಗ ಇದ್ದಂತೆ ನಾನೇ ಸಿಎಂ ಇದ್ದ ಹಾಗೆ : ಶಿವಗಂಗಾ ಬಸವರಾಜ್ಯಮಕನಮರಡಿಯಲ್ಲಿ ನಿಂತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ : ಚಾಲಕ ಪಾರು ಪಾಕ್ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆAಡ್ ತಂಡ ಪ್ರಕಟ