Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಕರ್ಮಭೂಮಿ, ಎಂದರು ಸಂಸದ ಜಗದೀಶ್ ಶಟ್ಟರ

Advertisement
ರಾಮದುರ್ಗ:- ಪಟ್ಟಣದ ಶ್ರೀ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ರಾಮದುರ್ಗ ಮಂಡಲದ ನೇತೃತ್ವದಲ್ಲಿ ಸಂಸದ ಜಗದೀಶ ಶೆಟ್ಟರ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹಾಗೂ ಬಿಜೆಪಿ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಸ್ ಪಾಟೀಲ ಅವರು ಏರ್ಪಡಿಸಿದ ಸತ್ಕಾರ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿದ.



ಈ ಸಂತಸ ಚುನಾವಣೆ ಗೆಲವು ನನ್ನದಲ್ಲ. ನನ್ನ ಗೆಲವು ಕಾರ್ಯಕರ್ತರಿಗೆ ಸಮರ್ಪಿಸುತ್ತೇನೆ. ರಾಜಕೀಯ ಜನ್ಮ ನೀಡಿದ ಭೂಮಿ ಹುಬ್ಬಳ್ಳಿಯಾದರೆ ಬೆಳಗಾವಿ ನನ್ನ ಕರ್ಮಭೂಮಿಯಾಗಿ ಸ್ವೀಕರಿಸಿದ್ದೇನೆ. ಈ ಭಾಗದ ಕಳಸಾ ಬಂಡೂರಿ ನಾಲೆ ಹಾಗೂ ಮಹಾದಾಯಿ ನದಿ ಜೋಡೆಣೆ ಸೇರಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಭರವಸೆ ನೀಡಿದರು.



ಸಂಸತ ಚುನಾವಣೆಯಲ್ಲಿ ಹಣಬಲ, ಅಧಿಕಾರದ ಬಲ ನಡೆಯುವುದಿಲ್ಲ ಎಂದು ಜಿಲ್ಲೆಯ ಕಾರ್ಯಕರ್ತರು ತೋರಿಸಿ ಕೊಟ್ಟಿದ್ದಾರೆ. ಸಚಿವರ ಕ್ಷೇತ್ರದಲ್ಲಿಯೇ ಮಗನಿಗೆ ಸುಮಾರು 50 ಸಾವಿರ ಮತಗಳು ಕಡಿಮೆ ಆಗಿರುವುದು ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ. ಈ ಬಾರಿ ಮೋದಿಯವರು ದೇಶದಲ್ಲಿ ನಡೆಸಿದ ಆಡಳಿತದಿಂದ ಭಾರತಕ್ಕೆ ಗೌರವ ನೀಡುವ ಜಯ ಬೆಳಗಾವಿ ಕ್ಷೇತ್ರದಿಂದ ನಡೆದಿದೆ. ರಾಮದುರ್ಗ ಭಾಗಕ್ಕೆ ರೇಲ್ವೆ ಯೋಜನೆ, ನೀರಾವರಿ, ಹಾಗೂ ಶಬರಿಕೊಳ್ಳ ಪ್ರವಾಸಿ ತಾಣ ನಿರ್ಮಾಣದ ಸ್ಥಳೀಯ ಬೇಡಿಕೆಗಳನ್ನು ಪೂರೈಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದರು .

ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ರಾಮದುರ್ಗ ಮತಕ್ಷೇತ್ರದ ಮೇಲೆ ಜಿಲ್ಲಾ ಮುಖಂಡರು ಹಾಗೂ ವರಿಷ್ಠರ ಆಶೀರ್ವಾದ ಇರಬೇಕು. ಯಾರು ಇಲ್ಲಿ ಪಕ್ಷ ಸಂಘಟನೆ ಹಾಗೂ ಜನತೆಯ ಸೇವೆ ಮಾಡುತ್ತಾರೆ ಎಂದು ಗಮನದಲ್ಲಿಟ್ಟುಕೊಂಡಿರಬೇಕು ಎಂದು ಮನವಿ ಮಾಡಿದ ಅವರು, ರಾಮದುರ್ಗ ತಾಲೂಕಿನ ಅಭಿವೃದ್ಧಿಗೆ ಜಗದೀಶ ಶೆಟ್ಟರ ವಿಶೇಷ ಕಾಳಜಿವಹಿಸಬೇಕು ಎಂದು ಮನವಿ ಮಾಡಿದರು.

ಈ ಕಾರ್ಯಕ್ರಮದಲ್ಲಿ ಇನ್ನು ಹಲವಾರು ಮುಖಂಡರು ಮಾತನಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಾರುತಿ ಕೊಪ್ಪದ, ಮುಖಂಡರಾದ ಪಿ.ಎಫ್. ಪಾಟೀಲ, ಮಾರುತಿ ಕೊಪ್ಪದ, ಎಸ್.ಎಸ್. ಢವಣ, ಇನ್ನು ಅನೇಕ ಮುಖಂಡರು ಕಾರ್ಯಕರ್ತರು ಸೇರಿದರು, ಮತ್ತು ಉಮೇಶ ಹಕಾಟಿ ಸ್ವಾಗತಿಸಿದರು, ರವೀಂದ್ರ ಹರವಿ ಪರಿಚಯಿಸಿದರು, ಶಂಕರ ಹುರಕಡ್ಲಿ ಕಾರ್ಯಕ್ರಮ ನಿರೂಪಿಸಿದರು,

ವರದಿ:-ಮಂಜುನಾಥ ಕಲಾದಗಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ