Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರಕಾರದ ನಿರ್ಧಾರಕ್ಕೆ ಕೈಜೋಡಿಸಿ : ಸಂಸದ ಯದುವೀರ

Advertisement
ಮೈಸೂರುಇಂದಿರಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೋಲಿಕೆ ಮಾಡಿ ಮಾತನಾಡುವುದು ಸರಿಯಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ ಕುರಿತು ನಡೆಯುತ್ತಿರುವ ಚರ್ಚೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂದಿನ ಕಾಲಕ್ಕೆ ತಕ್ಕಂತೆ ಇಂದಿರಾ ಗಾಂಧಿ ಕೆಲಸ ನಿರ್ವಹಿಸಿದ್ದಾರೆ. ಇಂದಿನ ಕಾಲಕ್ಕೆ ತಕ್ಕಂತೆ ನರೇಂದ್ರ ಮೋದಿ ಅವರ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಈ ವಿಚಾರದಲ್ಲಿ ಇಂದಿರಾಗಾಂಧಿ ಹಾಗೂ ನರೇಂದ್ರ ಮೋದಿ ಅವರನ್ನು ಹೋಲಿಕೆ ಮಾಡಿ ಮಾತನಾಡೋದು ಸರಿಯಲ್ಲ ಎಂದರು.

ಯುದ್ಧದ ಕ್ರೆಡಿಟ್ ಸೇನೆಗೆ ಸಲ್ಲಬೇಕು ಎಂದು ಕಾಂಗ್ರೆಸ್ ನಾಯಕರು ವಾದ ಮಾಡುತ್ತಿರುವ ವಿಚಾರವಾಗಿ ಮಾತನಾಡಿ, ಖಂಡಿತವಾಗಿಯೂ ಕ್ರೆಡಿಟ್ ಸೈನಿಕರಿಗೆ ಸಲ್ಲಬೇಕು. ಜೊತೆಗೆ ಯುದ್ಧದ ತಂತ್ರ ರೂಪಿಸಿದ ಕೇಂದ್ರ ಸರಕಾರಕ್ಕೂ ಸಲ್ಲಬೇಕು. ಇದರಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ. ನಾವು ರಾಜಕೀಯ ಮಾಡುತ್ತಿಲ್ಲ. ಕಾಂಗ್ರೆಸ್​ನವರಿಗೆ ಸಂದೇಶ ಕೊಡುವ ಸ್ಥಾನದಲ್ಲೂ ನಾನಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಎಲ್ಲರೂ ಒಗ್ಗಟ್ಟಾಗಿರಬೇಕು, ಕೇಂದ್ರ ಸರಕಾರದ ನಿರ್ಧಾರಕ್ಕೆ ಕೈಜೋಡಿಸಿ ನಿಲ್ಲಬೇಕು ಎಂದು ಹೇಳಿದರು.

ಭಾರತ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ವಿಚಾರ ಮಾತನಾಡಿದ ಅವರು, ಪೆಹಲ್ಗಾಮ್ ನಲ್ಲಿ ನಡೆದ ಘಟನೆಗೆ ಈಗಾಗಲೇ ಪ್ರಧಾನಿ ನರೇಂದ್ರಮೋದಿ ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ. 9 ಭಯೋತ್ಪಾದಕ ಶಿಬಿರಗಳನ್ನು ಗುರುತಿಸಿ, ದಾಳಿ ಮಾಡಿ ಪ್ರತೀಕಾರ ತೀರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಾಕಿಸ್ತಾನ ಏನೇ ಪ್ರಯತ್ನ ಮಾಡಿದರೂ ಅವರ ಪ್ರಯತ್ನಗಳನ್ನು ಮೊಟುಕುಗೊಳಿಸುವ ಕೆಲಸವನ್ನು ಭಾರತ ಸರಕಾರ ಮಾಡಿಯೇ ತೀರುತ್ತದೆ. ಪಾಕಿಸ್ತಾನದ ಎಲ್ಲಾ ಪ್ರಯತ್ನಗಳು ವಿಲವಾಗಿವೆ. ಭಯೋತ್ಪಾದನೆಗೆ ಅವಕಾಶ ಕೊಡದೇ ವಿಶ್ವದಾದ್ಯಂತ ಉಗ್ರವಾದ ತೊಲಗಿಸಬೇಕು. ಪಾಕಿಸ್ತಾನೀಯರು ಅವರ ಕೃತ್ಯಗಳನ್ನು ನಿಲ್ಲಿಸಿದರೆ ಮಾತ್ರ ವಿಶ್ವದಲ್ಲಿ ಶಾಂತಿ ಕಾಣಬಹುದು ಎಂದರು.

ಕಳೆದ ಏಪ್ರಿಲ್ 26 ನೇ ತಾರೀಕಿನಂದು ನಡೆದ ಘಟನೆ ಎಲ್ಲರಿಗೂ ಗೊತ್ತೇ ಇದೆ. ಹಿಂದೂಗಳನ್ನೇ ಗುರುತಿಸಿ ಕೊಂದದ್ದನ್ನು ನಾವೆಲ್ಲರೂ ಗಮನಿಸಿದ್ದೇವೆ. ನಾವು ಅವರಿಗೆ ಸರಿಯಾದ ರೀತಿಯಲ್ಲೇ ಉತ್ತರ ನೀಡಿದ್ದೇವೆ. ನಾವೇನು ಸೇಡಿನ ಯುದ್ಧ ನಡೆಸಿಲ್ಲ, ಬದಲಾಗಿ ನಿಖರವಾಗಿ ಉಗ್ರರನ್ನೇ ಗುರುತಿಸಿ ಯುದ್ಧ ಮಾಡಿದ್ದೇವೆ.ಭಾರತೀಯ ಸಂಸ್ಕೃತಿಗೆ ತಕ್ಕಂತೆ ಸರಕಾರ ಉತ್ತರ ನೀಡಿದೆ. ಅಮಾಯಕರ ಸಾವಿಗೆ ನ್ಯಾಯ ಒದಗಿಸುವ ಕೆಲಸವನ್ನು ಭಾರತ ಸರಕಾರ ಮಾಡಿದೆ ಎಂದು ಸಂಸದ ಯದುವೀರ್​ ಒಡೆಯರ್​ ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ