Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇನೆ ; ಮೃಣಾಲ ಹೆಬ್ಬಾಳ್ಕರ್

Advertisement
ಬೆಳಗಾವಿ : ಇಡೀ ದೇಶದಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಅಭಿವೃದ್ಧಿ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡುವ ಆಶಯ ಇದ್ದು; ಜಿಲ್ಲೆಯ ಜನರು ತಮಗೊಮ್ಮೆ ಅವಕಾಶ ಮಾಡಿಕೊಡಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.

ಗೋಕಾಕ ತಾಲೂಕಿನ ಹಿರೇನಂದಿಯಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಭೆ ನಡೆಸಿದ ಅವರು, ಕಳೆದ ಇಪ್ಪತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ; ಹಾಗೆಯೇ ಕ್ಷೇತ್ರದ ಅಭಿವೃದ್ಧಿಗಾಗಿ ಜಿಲ್ಲೆಯ ಮಗನಾಗಿ, ನಿಮ್ಮ ಮನೆ ಮಗನಾಗಿ ಸದಾ ನಿಮ್ಮೆಲ್ಲರ ಸೇವೆ ಮಾಡಲು ನನಗೊಮ್ಮೆ ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದರು.

ಕ್ಷೇತ್ರದ ಯಾವುದೇ ಕೆಲಸ ಕಾರ್ಯ ಇರಲಿ; ವೈಯಕ್ತಿಕವಾದ ಕೆಲಸವೇ ಆಗಲಿ, ಯಾವುದೇ ಕಾರಣಕ್ಕೂ ಜನರು ಹುಬ್ಬಳ್ಳಿಗೆ ಹೋಗಬೇಕಾದ ಅವಶ್ಯಕತೆ ಇರುವುದಿಲ್ಲ ಎಂದ ಮೃಣಾಲ ಹೆಬ್ಬಾಳ್ಕರ್, ನಾನು ನಿಮ್ಮ ಮನೆ ಮಗ; ಸದಾ ನಿಮ್ಮೊಂದಿಗೆ ಇರುವವನು; ನಿಮ್ಮ ಯಾವುದೇ ಕೆಲಸವಿರಲಿ; ಅದನ್ನು ಶಿರಸಾವಹಿಸಿ ಮಾಡಿಕೊಡುತ್ತೇನೆ ಎಂದು ಅವರು ಭರವಸೆ ನೀಡಿದರು.

ರಾಜ್ಯದ ನಮ್ಮ ನಾಯಕರಾದ ಸಿದ್ದರಾಮಯ್ಯನವರು ಮತ್ತು ಸತೀಶ್ ಜಾರಕಿಹೊಳಿಯವರ ಆಶೀರ್ವಾದದಿಂದ ಬರುವ ದಿನಗಳಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಇಡೀ ದೇಶದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಬೇಕೆನ್ನುವ ಆಶಯ ಇದೆ; ಯಾವುದೇ ರೀತಿಯಿಂದಲೂ ಜಿಲ್ಲೆಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇನೆ; ನಮ್ಮ ಯೋಜನೆಗಳು ಕೂಡ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಅವರು ಇದೇ ವೇಳೆ ಹೇಳಿದರು.

ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ತೇಜಸ್ವಿನಿ ಗೌಡ, ಸಿದ್ದಲಿಂಗಣ್ಣ ದಾಮ್ಲೆ, ಮಹಾಂತೇಶ್ ಕಡಾಡಿ, ಚಂದ್ರಶೇಖರ್ ಕೊಣ್ಣೂರ್, ದೇವರಾಜು ಕಗ್ಗೂರು, ಸುಭಾಷ್ ಅಕ್ಕಿ, ಸಂತೋಷ್ ಅಂಕಲಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ