Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಕೆಲಸ ನೋಡಿದ್ದೀರಿ, ನನಗೊಂದು ಅವಕಾಶ ಕೊಡಿ - ಮೃಣಾಲ ಹೆಬ್ಬಾಳಕರ್

Advertisement
ಬೆಳಗಾವಿ : ಕಳೆದ 20 ವರ್ಷ ಬಿಜೆಪಿಗೆ ಅಧಿಕಾರ ಕೊಟ್ಟು ನೋಡಿದ್ದೀರಿ. ಈ ಬಾರಿ ನನಗೆ ಅವಕಾಶ ಮಾಡಿಕೊಡಿ. ನಿಮ್ಮ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡಿ ತೋರಿಸುತ್ತೇನೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಹೇಳಿದರು.



ಬೆಳಗಾವಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಮಾರ್ಕಂಡೇಯ ನಗರದಲ್ಲಿ ಶುಕ್ರವಾರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಕೆಲಸಗಳು ಭಿನ್ನವಾಗಿರುತ್ತವೆ. ಕೇಂದ್ರದಿಂದ ದೊಡ್ಡ ದೊಡ್ಡ ಯೋಜನೆಗಳನ್ನು ತರಲು ಅವಕಾಶವಿರುತ್ತದೆ. ಇದರಿಂದ ನಮ್ಮ ಪ್ರದೇಶದ ಅಭಿವೃದ್ಧಿಯಾಗುತ್ತದೆ, ಯುವಕರಿಗೆ ಉದ್ಯೋಗ ಸಿಗುತ್ತದೆ. ಆದರೆ ಕಳೆದ 4 ಅವಧಿಯಲ್ಲಿ ಬೆಳಗಾವಿಯನ್ನು ಪ್ರತಿನಿಧಿಸಿದ ಸಂಸದರಿಂದ ಜನರು ನಿರೀಕ್ಷೆ ಮಾಡಿದ್ದಷ್ಟು ಕೆಲಸಗಳಾಗಿಲ್ಲ. ಯಾರದ್ದೋ ಮುಖ ನೋಡಿ ಮತ ಹಾಕುವುದಕ್ಕಿಂತ ನಮ್ಮಿಂದ ಆಯ್ಕೆಯಾದವರು ನಮಗೆ ಏನು ಮಾಡಬಲ್ಲರು ಎನ್ನುವುದನ್ನು ಯೋಚಿಸಬೇಕು ಎಂದು ಅವರು ಹೇಳಿದರು.
ನಾನು ವಿದ್ಯಾವಂತನಾಗಿದ್ದು, ಕ್ಷೇತ್ರದ ಅಭಿವೃದ್ಧಿಯ ಸ್ಪಷ್ಟ ಕಲ್ಪನೆ ಇದೆ. ನಮ್ಮೂರಿನ ಮಕ್ಕಳ ಇಲ್ಲೇ ಉದ್ಯೋಗ ಮಾಡಿದರೆ ತಂದೆ, ತಾಯಿಗಳಿಗೂ ಆಸರೆಯಾಗುತ್ತಾರೆ. ಅಂತಹ ಅವಕಾಶ ಕಲ್ಪಿಸಲು ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ ನೀಡುತ್ತೇನೆ. ಯುವಕರು ಉದ್ಯಮಿಗಳಾಗಲು ಪ್ರೋತ್ಸಾಹ ಮತ್ತು ತರಬೇತಿ ಒದಗಿಸಲಾಗುವುದು. ಶೈಕ್ಷಣಿಕ ಅವಕಾಶಗಳನ್ನೂ ಕಲ್ಪಿಸಲಾಗುವುದು. ಹಾಗಾಗಿ ಕಾಂಗ್ರೆಸ್ ಪಕ್ಷದ ಚಿಹ್ನೆಯಾಗಿರುವ ಹಸ್ತಕ್ಕೆ ಮತ ನೀಡುವ ಮೂಲಕ ಈ ಬಾರಿ ನನಗೆ ಅವಕಾಶ ಮಾಡಿಕೊಡಿ ಎಂದು ಅವರು ವಿನಂತಿಸಿದರು.

ಗ್ರಾಮದ ಹಿರಿಯರು ತಲೆಯ ಮೇಲೆ ಕೈ ಇಟ್ಟು ಆಶಿರ್ವಾದ ಮಾಡಿದರು. ಖಂಡಿತ ನಮ್ಮೆಲ್ಲರ ಮತವನ್ನು ನಿಮಗೆ ನೀಡುತ್ತೇವೆ ಎಂದು ಭರವಸೆ ನೀಡಿದರು. ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳು, ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ