Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೀಠದಿಂದ ಮೃತ್ಯುಂಜಯ ಶ್ರೀ ಬದಲಾವಣೆ ಸುಳಿವು ಶಾಸಕ ಕಾಶಪ್ಪನವರ್ 

Advertisement
ಬಾಗಲಕೋಟೆ: ಬಿಜೆಪಿ ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮಾಜದ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಪಂಚಮಸಾಲಿ ಸಮಾಜ ಟ್ರಸ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಇದರ ಬೆನ್ನಲ್ಲೇ ಜಯಮೃತ್ಯುಂಜಯ ಶ್ರೀಗಳ ಬದಲಾವಣೆಗೆ ಚಿಂತನೆ ನಡೆದಿದೆ.ಹುನಗುಂದ ಶಾಸಕ, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಈ ಕುರಿತು ಸುಳಿವು ನೀಡಿದ್ದಾರೆ.

ಪಂಚಮಸಾಲಿ ಸಮಾಜ ಇವರನ್ನು ಗುರುಗಳನ್ನಾಗಿ ಮಾಡಿದೆ. ಗುರುಗಳು ಸ್ವಯಂ ಘೋಷಿತರಾಗಿ ಇವರೇ ಬಂದಿಲ್ಲ. ಬದಲಾವಣೆಯ ಕಾಲ ಬಂದಾಗ ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದು, ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬದಲಾವಣೆ ಕುರಿತು ಪರೋಕ್ಷ ಸುಳಿವು ನೀಡಿದ್ದಾರೆ.

ಸಮಾಜ ಇವರನ್ನು ಗುರುಗಳನ್ನಾಗಿ ಮಾಡಿದೆ ಕಾಲ ಬಂದಾಗ ಯಾರೂ ತಡೆಯಲು ಆಗುವುದಿಲ್ಲ. ಅವರ ಕಾಲ ಮುಗಿದಿದೆ. ಬದಲಾವಣೆ ಹಾಗೇ ಆಗುತ್ತದೆ ಎಂದು ಕಾಶಪ್ಪನವರ್ ಹೇಳಿದ್ದಾರೆ.

ಯತ್ನಾಳ್ ಮುಖ್ಯಮಂತ್ರಿ ಆಗುವುದು ತಿರುಕನ ಕನಸು. ಮುಖ್ಯಮಂತ್ರಿ ಆಗುವುದಿರಲಿ, ಅವರು 2028ರಲ್ಲಿ ಗೆದ್ದು ವಿಧಾನಸೌಧಕ್ಕೆ ಬರಲಿ ನೋಡೋಣ ಎಂದು ಕಾಶಪ್ಪನವರ್ ಸವಾಲು ಹಾಕಿದ್ದಾರೆ.

2028ಕ್ಕೆ ನಾನೇ ಸಿಎಂ ಎನ್ನುವ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದ ಕಾಶಪ್ಪನವರ್, ಮತ್ತೆ ಗೆಲ್ಲುತ್ತೇನೆ ಎನ್ನುವುದೇ ತಿರುಕನ ಕನಸು. ಅವರು ಹಗಲುಗನಸು ಕಾಣುವವರು ಎಂದು ವ್ಯಂಗ್ಯವಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ