Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಿಹಳ್ಳಿ ಗ್ರಾಪಂ ನೂತನ ಕಾರ್ಯಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ : ಶಾಸಕ ಎಂ.ಟಿ.ಕೃಷ್ಣಪ್ಪ

Advertisement
ತುರುವೇಕೆರೆ: ತಾಲೂಕಿನ ಅರಳೀಕೆರೆ ಗ್ರಾಮದಲ್ಲಿ 20ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ ಸುಮಾರು 28 ಲಕ್ಷ ರೂ ವೆಚ್ಚದ ಮಾದಿಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಕಾರ್ಯಾಲಯ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಗುದ್ದಲಿ ಪೂಜೆ ನೆರವೇರಿಸಿದರು.



ನಂತರ ಮಾತನಾಡಿದ ಶಾಸಕ ಎಂ.ಟಿ.ಕೃಷ್ಣಪ್ಪ, ಸರ್ಕಾರದಿಂದ ಮಾದಿಹಳ್ಳಿ ಗ್ರಾಮ ಪಂಚಾಯ್ತಿ ನೂತನ ಕಾರ್ಯಾಲಯ ನಿರ್ಮಾಣ ಕಾಮಗಾರಿಗೆ 28 ಲಕ್ಷ ರೂ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಗುದ್ದಲಿ ಪೂಜೆ ನೆರವೇರಿಸಿದ್ದು, ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣವಾಗಬೇಕು. ಗುತ್ತಿಗೆದಾರರು ಕಾಮಗಾರಿಯಲ್ಲಿ ಯಾವುದೇ ಲೋಪವಿಲ್ಲದಂತೆ ಬಹಳ ವರ್ಷಕಾಲ ಬಾಳಿಕೆ ಬರುವಂತೆ ಕಟ್ಟಡ ನಿರ್ಮಿಸಬೇಕು. ಮಾದಿಹಳ್ಳಿ ಪಂಚಾಯ್ತಿ ಅಧ್ಯಕ್ಷರು, ಸದಸ್ಯರುಗಳು ಕಟ್ಟಡ ಕಾಮಗಾರಿಯ ಬಗ್ಗೆ ಗಮನಹರಿಸಬೇಕು. ಸರ್ಕಾರದ ಹಣ ದುರುಪಯೋಗವಾಗಬಾರದು. ಸುಸಜ್ಜಿತ ಕಟ್ಟಡ ನಿರ್ಮಾಣವಾದರೆ ಪಂಚಾಯ್ತಿಯ ಆಡಳಿತ ವ್ಯವಹಾರಕ್ಕೆ, ಸಭೆಗಳಿಗೆ ಅನುಕೂಲವಾಗಲಿದೆ ಎಂದರು.

ಅರಳೀಕೆರೆ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಿದ್ದು, ಉದ್ಘಾಟನೆ ಮಾಡಲಾಗಿದೆ. ಈ ದಿನದಿಂದಲೇ ಅಂಗನವಾಡಿ ಕಾರ್ಯನಿರ್ವಹಿಸಲಿದ್ದು, ಪುಟಾಣಿ ಮಕ್ಕಳಿಗಾಗಿ ಉತ್ತಮ ಗುಣಮಟ್ಟದಲ್ಲಿ ಅಂಗನವಾಡಿ ನಿರ್ಮಿಸಲಾಗಿದೆ. ಅಂಗನವಾಡಿ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲತಾಯೋಗಾನಂದ್, ಉಪಾಧ್ಯಕ್ಷ ಹರೀಶ್, ಸದಸ್ಯರಾದ ಬೊಮ್ಮಲಿಂಗಯ್ಯ, ಮಂಜುನಾಥ್, ಅನುಸೂಯ, ಜಗದೀಶ್, ವೆಂಕಟೇಶ್, ಕಾಳಮ್ಮರವೀಶ್, ನಂಜಮ್ಮ, ಶೃತಿಲಕ್ಷ್ಮೀಕಾಂತ್, ನಂಜುಂಡಯ್ಯ, ಗಿರೀಶ್, ವಿನೋದಮಂಜುನಾಥ್, ದಿವ್ಯರಂಗನಾಥಗೌಡ, ಕೆಂಪಯ್ಯ, ಶಿವಮ್ಮ, ಪಿಡಿಒ ಸುರೇಶ್, ಕಾರ್ಯದರ್ಶಿ ನರೇಂದ್ರ, ಜೆಡಿಎಸ್ ಮುಖಂಡರಾದ ಯೋಗಾನಂದ್, ಮಾದಿಹಳ್ಳಿ ಕಾಂತರಾಜು, ವೆಂಕಟಾಪುರ ಯೋಗೀಶ್, ಗ್ರಾಮಸ್ಥರಾದ ಕೃಷ್ಣಪ್ಪ, ಚಂದ್ರಣ್ಣ, ಸಿದ್ದೇಗೌಡ, ಶಿವರಾಜ್, ಕೆಂಪೇಗೌಡ, ಕುಮಾರ್, ಸದಾಶಿವಯ್ಯ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ