Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣ ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕು:ಬಿಜೆಪಿ ಜಿಲ್ಲಾಧ್ಯಕ್ಷ‌ ಸತೀಶ ಅಪ್ಪಾಜಿಗೋಳ.

Advertisement
ಚಿಕ್ಕೋಡಿ: -ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ ಮುಡಾ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕೆಂದು ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ ಆಗ್ರಹಿಸಿದ್ದಾರೆ.



ಚಿಕ್ಕೋಡಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದ ಬಂದಾಗಿನಿಂದಲೂ ಪ್ರತಿಯೊಂದು ಇಲಾಖೆಯೂ ಸಹ ಭ್ರಷ್ಟಾಚಾರವು ತಾಂಡವ ಆಡುತ್ತಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಸ್ವಂತ ಸಿದ್ದರಾಮಯ್ಯ ಅಲ್ಲಿನ ಅಧ್ಯಕ್ಷ ಹಾಗೂ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ತಮ್ಮ ಪತ್ನಿಯ ಹೆಸರಿನ ನಿವೇಶನಗಳನ್ನು ಬೇರೆ ಕಡೆ ಹಂಚಿಕೆ ಮಾಡಿರುತ್ತಾರೆ.ಈ ಹಿನ್ನಲೆಯಲ್ಲಿ ಈ ಭ್ರಷ್ಟಾಚಾರವನ್ನು ಖಂಡಿಸಿ ಬಿಜೆಪಿಯು ಪ್ರತಿಭಟನೆಯನ್ನು ನಟಿಸುತ್ತಿದೆ.

ಈ ಪ್ರಕರಣದಲ್ಲಿ ನಾಲ್ಕು ಸಾವಿರಕ್ಕಿಂತ ಕೋಟಿಗಿಂತ ಹೆಚ್ಚು ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಸಿಎಂ ಸಿದ್ದರಾಮಯ್ಯ ಕೋಟ್ಯಾಂತರ ಹಣವನ್ನು ಮಾಡಿ ಸಣ್ಣ ಮೊತ್ತವನ್ನು ಸುನಿಯಾ ಗಾಂಧಿಯವರಿಗೆ ಕೊಟ್ಟಿರುತ್ತಾರೆ. ಇದಕ್ಕೆಲ್ಲ ತೆಪ್ಪೆ ಹಾಕುವಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ತನಿಖಾ ಅಧಿಕಾರಿಗಳನ್ನಾಗಿ ನೇಮಿಸಿ ಜನರ ಕಣ್ಣಿಗೆ ಬೂದಿ ಎರಚಲು ಹೊರಟಿದ್ದಾರೆ. ಸರಿಯಾದ ಸತ್ಯ ಹೊರ ಬರಬೇಕಾದರೆ ಒಬ್ಬ ನಿಷ್ಪಕ್ಷಪಾತವಾಗಿರುವಂತಹ ಹಿರಿಯ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವಂತಹ ಸಚಿವ ಭೈರತಿ ಸುರೇಶ ಹಾಗೂ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಬೈಟ್: ಸತೀಶ ಅಪ್ಪಾಜಿಗೋಳ ಚಿಕ್ಕೋಡಿ ಬಿಜಿಪಿ ಜಿಲ್ಲಾಧ್ಯಕ್ಷ ,ಈ ಸಂಧರ್ಭದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷ್ಯೆ ಶಾಂಭವಿ ಅಶ್ವತಪೂರ,ಅಭಯ ಮಾನ್ವಿ,ಅಪ್ಪಾಸಾಹೇಬ ಚೌಗಲಾ,ರಾಜು ಹರಗನ್ನವರ,ಅಮೃತ ಕುಲಕರ್ಣಿ ,ಸಂಜು ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ :-ರಾಜು ಮುಂಡೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ