Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಲಭ ಗೆಲುವಿನೊಂದಿಗೆ ಮೂರನೇ ಸ್ಥಾನಕ್ಕೆ ಜಿಗಿದ ಮುಂಬೈ ಇಂಡಿಯನ್ಸ್

Advertisement
ಹೈದರಾಬಾದ್: ರೋಹಿತ್ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಇಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯ 41 ನೇ ಲೀಗ್ ಪಂದ್ಯದಲ್ಲಿ ಸನ್ ರೈಜರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗಳ ಸುಲಭ ಗೆಲುವು ಪಡೆಯುವುದರೊಂದಿಗೆ ಪಂದ್ಯಾವಳಿಯಲ್ಲಿ ಮುಂದಿನ ಹಂತಕ್ಕೆ ಅರ್ಹತೆ ಪಡೆಯಲು ರೇಸ್ ನಲ್ಲಿ ಉಳಿದುಕೊಂಡಿದೆ.

ಇಲ್ಲಿನ ರಾಜೀವ ಗಾಂಧಿ  ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಜರ್ಸ್ ಹೈದರಾಬಾದ್ ತಂಡವು ನಿಗದಿತ 20 ಓವರುಗಳಲ್ಲಿ 8 ವಿಕೆಟ್ ಗೆ 143 ರನ್ ಗಳನ್ನು ಮಾತ್ರ ಗಳಿಸಿತು. ಸುಲಭದ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 15.4 ಓವರುಗಳಲ್ಲಿ 3 ವಿಕೆಟ್ ಗೆ 146 ರನ್ ಗಳಿಸಿ ಗೆಲುವಿನ ನಗೆ ಬೀರಿತು.



ಈ ಗೆಲುವಿನೊಂದಿಗೆ ತಾನಾಡಿರುವ 9 ಪಂದ್ಯಗಳಿಂದ 5 ರಲ್ಲಿ ಗೆದ್ದು 4 ರಲ್ಲಿ ಸೋತು 10 ಪಾಯಿಂಟ್ ಗಳನ್ನು ಕಲೆ ಹಾಕಿರುವ ಹಾರ್ಧಿಕ ಪಾಂಡ್ಯಾ ಬಳಗ ರನ್ ಸರಾಸರಿ ಉತ್ತಮ ಪಡಿಸಿಕೊಂಡಿದ್ದರಿಂದ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಭಡ್ತಿ ಪಡೆಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕನೇ ಸ್ಥಾನ ಹಾಗೂ ಪಂಜಾಬ್ ಕಿಂಗ್ಸ್ 5 ನೇ ಸ್ಥಾನದಲ್ಲಿ ಉಳಿದುಕೊಂಡವು.

ಸ್ಕೋರ್ ವಿವರ:

ಸನ್ ರೈಜರ್ಸ್ ಹೈದರಾಬಾದ್ 20 ಓವರುಗಳಲ್ಲಿ 8 ವಿಕೆಟ್ ಗೆ 143

ಕ್ಲಾಸೆನ್ 71 ( 44 ಎಸೆತ, 9 ಬೌಂಡರಿ 2 ಸಿಕ್ಸರ್), ಅಭಿನವ ಮನೋಹರ 43 ( 37 ಎಸೆತ, 2 ಬೌಂಡರಿ, 3 ಸಿಕ್ಸರ್)

ಟ್ರೆಂಟ್ ಬೋಲ್ಟ್ 26 ಕ್ಕೆ4, ಚಹರ 12 ಕ್ಕೆ 2)

ಮುಂಬೈ ಇಂಡಿಯನ್ಸ್ 15.4 ಓವರುಗಳಲ್ಲಿ 3 ವಿಕೆಟ್ ಗೆ 146

ರೋಹಿತ್ ಶರ್ಮಾ 70 ( 46 ಎಸೆತ, 8 ಬೌಂಡರಿ, 3 ಸಿಕ್ಸರ್), ಸೂರ್ಯಕುಮಾರ ಯಾದವ 40 ( 19 ಎಸೆತ, 5 ಬೌಂಡರಿ, 2 ಸಿಕ್ಸರ್ )

ಪಂದ್ಯ ಶ್ರೇಷ್ಠ: ಟ್ರೆಂಟ್ ಬೋಲ್ಟ್- 26 ಕ್ಕೆ4  
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ