LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

"ಗೃಹಲಕ್ಷ್ಮೀ" ಸರ್ಕಾರದ ಆಶಾದಾಯಕ ಯೋಜನೆ : ತಾಪಂ‌ ಆಡಳಿತಾಧಿಕಾರಿ‌ ಮೂರ್ತಿ

Advertisement
ತುರುವೇಕೆರೆ : ಗೃಹಿಣಿಯರಿಗಾಗಿ ಸರ್ಕಾರ ಜಾರಿಗೊಳಿಸಿರುವ "ಗೃಹಲಕ್ಷ್ಮೀ" ಆಶಾದಾಯಕ ಯೋಜನೆಯಾಗಿದೆ ಎಂದು ತಾಪಂ ಆಡಳಿತಾಧಿಕಾರಿ ಹೆಚ್.ಮೂರ್ತಿ ತಿಳಿಸಿದರು.

ತಾಲ್ಲೂಕು ಪಂಚಾಯತಿ ಸಬಾಂಗಣದಲ್ಲಿ ತುಮಕೂರು ಸಹಕಾರ ಸಂಘಗಳ ಉಪನಿಬಂಧಕರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಿಂದ ಸಾಕಷ್ಟು ಕುಟುಂಬದ ಸಣ್ಣಪುಟ್ಟ ಸಮಸ್ಯೆ ಬಗೆಹರಿದಿವೆ. ಕೆಲವು ಮಹಿಳೆಯರು ಚಿಲ್ಲರೆ ಅಂಗಡಿಯನ್ನಿಟ್ಟುಕೊಂಡು ಸ್ವಾಭಿಮಾನದ ಬದುಕನ್ನು ಸಾಗಿಸುತ್ತಿದ್ದಾರೆ. ಕೆಲವರು ತಮ್ಮ ಮಕ್ಕಳ ವಿದ್ಯಾಬ್ಯಾಸಕ್ಕೆ ಬಳಸಿದ್ದಾರೆ. ಹತ್ತಾರು ರೀತಿಯಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಬಳಕೆಯಾಗುತ್ತಿದ್ದು, ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಟ್ಟಲ್ಲಿ ಅದರ ಫಲಶೃತಿ ಖಂಡಿತಾ ದೊರೆಯುತ್ತದೆ ಎಂದರು.



ಸಭೆಯಲ್ಲಿ CDPO ವೆಂಕಟಪ್ಪ ತಮ್ಮ ಸೇವಾ ಅವಧಿಯ ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡು ಮಾತನಾಡಿ, ಹಾಡಿಗಳಲ್ಲಿ, ಗುಡ್ಡಗಾಡು ಪ್ರದೇಶಗಳಲ್ಲಿ, ಬುಡಕಟ್ಟು ಸಮುದಾಯಗಳ ಹೆಣ್ಣು ಮಕ್ಕಳು ಈಗಲೂ ಜೀವನ ನಡೆಸಲು ಹರಸಾಹಸ ಪಡುತ್ತಾರೆ. ಅಂತಹ ಸಮುದಾಯಗಳಿಗೆ ಗೃಹಲಕ್ಷಿ ಯೋಜನೆ ಬಹಳ ಉಪಯೋಗವಾಗುತ್ತದೆ. ಕಡಿಮೆ ವೇತನಕ್ಕೆ ಕೆಲಸ ಮಾಡುವ ಈ ಸಮುದಾಯಗಳಿಗೆ ಗೃಹಲಕ್ಷ್ಮೀಯ ಎರಡು ಸಾವಿರ ರೂ ಹಣ ಖಾತೆಗೆ ಬಂದಲ್ಲಿ ಅವರ ಖುಷಿಗೆ ಪಾರವೇ ಇಲ್ಲ ಎಂದು ಸರ್ಕಾರದ ಯೋಜನೆ

ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ ಮಾತನಾಡಿ, ಬಿಸಿಯೂಟ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಮೊಟ್ಟೆ, ಹಾಲು, ಬಾಳೆಹಣ್ಣು ಇದರ ಜೊತೆಗೆ ರಾಗಿ ಮಾಲ್ಟ್ ನೀಡುತ್ತಿರುವ ಕಾರಣ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ದೊರಕುತ್ತಿದೆ, ಇದರ ಜೊತೆಗೆ ದಿನನಿತ್ಯ ತರಕಾರಿ ಸೊಪ್ಪು ಖರೀದಿಸಲು ಶಾಲಾ ಮುಖ್ಯ ಶಿಕ್ಷಕರಿಗೆ ಜವಾಬ್ದಾರಿ ನೀಡಿದ್ದು ಅದರ ಖರ್ಚು ವೆಚ್ಚ ಮುಖ್ಯ ಶಿಕ್ಷಕರ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದರು.

ಸಭೆಗೆ ಗೈರಾಗಿರುವ ಆರೋಗ್ಯ ಇಲಾಖೆ, PWD ಇಲಾಖೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ನೋಟೀಸ್ ನೀಡಲು ಸೂಚಿಸಿದರು. ಈ ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ, ಕೃಷಿ ಇಲಾಖೆ‌ ನಿರ್ದೇಶಕಿ ಪೂಜಾ, ಎನ್.ಆರ್.ಇ.ಜಿ. ಸಹಾಯಕ ನಿರ್ದೇಶಕ ಸುರೇಶ್, ಚಂದ್ರಶೇಖರ್, ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಪಂ ವ್ಯವಸ್ಥಾಪಕರು ಮುಂತಾದವರು ಭಾಗವಹಿಸಿದ್ದರು.

ವರದಿ : ಗಿರೀಶ್ ಕೆ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ