LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುತ್ತಣ್ಣ, ನಯಾಜ್ ತಂಡಕ್ಕೆ ಭರ್ಜರಿ ಗೆಲುವು

Advertisement
--------------------------------------------------------------------------ಡಿ.ಕಲ್ಕೆರೆ ಹಾಲು ಉತ್ಪಾದರ ಸಂಘದ ಚುನಾವಣೆ

ತುರುವೇಕೆರೆ: ತಾಲ್ಲೂಕಿನ ಡಿ.ಕಲ್ಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಮೃತ್ಯುಂಜಯ, ಉದ್ಯಮಿ ನಯಾಜ್ ಪಾಷ ನೇತೃತ್ವದ ತಂಡ ಭರ್ಜರಿ ಜಯಗಳಿಸಿದೆ.

ಡಿ.ಕಲ್ಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 240 ಮಂದಿ ಷೇರುದಾರರಿದ್ದು, ಸಂಘದ 13 ಮಂದಿ ನಿರ್ದೇಶಕರ ಆಯ್ಕೆಗೆ ಆಗಸ್ಟ್ 03 ಭಾನುವಾರದಂದು ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಸಂಘದ 13 ಸ್ಥಾನಗಳಿಗೆ 27 ಮಂದಿ ನಾಮಪತ್ರ ಸಲ್ಲಿಸಿ ಚುನಾವಣಾ ಕಣದಲ್ಲಿದ್ದರು. ಚುನಾವಣೆ ನಡೆದು ಫಲಿತಾಂಶ ಹೊರಬಂದಾಗ 13 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ಬಿಜೆಪಿ ಅಧ್ಯಕ್ಷ ಮೃತ್ಯುಂಜಯ, ಉದ್ಯಮಿ ನಯಾಜ್ ಪಾಷ ನೇತೃತ್ವದ ತಂಡ ಜಯಗಳಿಸಿ ಸಂಘದ ಅಧಿಕಾರದ ಚುಕ್ಕಾಣಿ ಹಿಡಿಯುವ ಹೊಸ್ತಿಲಿಗೆ ಬಂದು ನಿಂತಿದೆ.



ಸಂಘದ ಚುನಾವಣೆಯಲ್ಲಿ ಬಿಜೆಪಿ ಅಧ್ಯಕ್ಷ ಮೃತ್ಯುಂಜಯ (ಮುತ್ತಣ್ಣ), ಉದ್ಯಮಿ ನಯಾಜ್ ಪಾಷ ನೇತೃತ್ವದ ತಂಡದಲ್ಲಿ ಕೆ.ವಿ.ಮೃತ್ಯುಂಜಯ, ಕೆ.ಜೆ.ರವಿ, ಕೆ.ಜೆ.ಕಣ್ಣನ್, ನಯಾಜ್ ಪಾಷ, ಪರಮೇಶ್ವರಯ್ಯ, ಪುಟ್ಟಮ್ಮ, ಶೇಷಗಿರಿ, ಶ್ರೀಕಂಠೇಗೌಡ, ಕೆ.ವಿ.ರವಿಕುಮಾರ್, ಪದ್ಮ ಜಯಗಳಿಸಿದರೆ, ಮತ್ತೊಂದು ತಂಡದಲ್ಲಿ ಕೆ.ಪಿ.ನವೀನ್ ಕುಮಾರ್, ಕೃಷ್ಣಪ್ಪ, ಚಿಕ್ಕರಂಗಯ್ಯ ಜಯಗಳಿಸಿದರು.

ವಿಜೇತ ನೂತನ ನಿರ್ದೇಶಕರುಗಳು ಗ್ರಾಮದ ಬಸವಣ್ಣನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ವಿಜೇತ ಅಭ್ಯರ್ಥಿಗಳ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಅಭಿಮಾನಿಗಳು, ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಡಿ.ಕಲ್ಕೆರೆ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಮೃತ್ಯುಂಜಯ ಮತ್ತು ನಯಾಜ್ ಪಾಷ ಮಾಧ್ಯಮದೊಂದಿಗೆ ಮಾತನಾಡಿ, ಸಂಘದ ನಿರ್ದೇಶಕರ ಚುನಾವಣೆಯಲ್ಲಿ ನಮ್ಮ ತಂಡ ಭರ್ಜರಿ ಜಯಗಳಿಸಿರುವುದು ಬಹಳ ಸಂತೋಷ ತಂದಿದೆ. ಸಂಘದ ಷೇರುದಾರರು ನಮ್ಮ ತಂಡದ ಮೇಲೆ ಭರವಸೆಯಿಟ್ಟು ನಮ್ಮನ್ನು ಹೆಚ್ಚಿನ ಮತ ನೀಡಿ ಆರ್ಶೀವದಿಸಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬರದಂತೆ ಸಂಘದ ಅಭಿವೃದ್ದಿಗೆ, ಷೇರುದಾರರ ಪ್ರಗತಿಗೆ ಕೆಲಸ ನಿರ್ವಹಿಸಲಾಗುವುದು. ಸಂಘದ ಎಲ್ಲಾ ಷೇರುದಾರರಿಗೆ ಧನ್ಯವಾದಗಳನ್ನು ಅರ್ಪಿಸಲಾಗುವುದು ಎಂದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ