Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ : ಸಿದ್ದರಾಮಯ್ಯ ವಾಗ್ದಾಳಿ 

Advertisement
ಬೆಂಗಳೂರು: ಎರಡು ವಾರಗಳ ಕಾಲ ನಡೆದ ಮುಂಗಾರು ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಯಾವುದೇ ವಿಷಯಗಳ ಚರ್ಚೆ ನಡೆಸದೇ ಪ್ರತಿಭಟನೆಗಳಲ್ಲೇ ಕಾಲ ಹರಣ ಮಾಡುವ ಮೂಲಕ ಕಲಾಪ ಮುಗಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಪ್ರವಾಹದ ಬಗ್ಗೆ ವಿಪಕ್ಷದವರು ಚರ್ಚೆ ಮಾಡಿಲ್ಲ.

ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿಲ್ಲ. ಮುಡಾ ಪ್ರಕರಣದ ಬಗ್ಗೆ ಆಧಾರ ರಹಿತವಾಗಿ ಕಾನೂನು ಬಾಹಿರ ನಿಲುವಳಿ ಸೂಚನೆ ಮಂಡಿಸಿದರು. ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಸ್ಪೀಕರ್ ಚರ್ಚೆಗೆ ಅವಕಾಶ ನೀಡಿಲ್ಲ. ಬಿಜೆಪಿ-ಜೆಡಿಎಸ್ ಸದಸ್ಯರು ರಾಜಕೀಯ ದುರುದ್ದೇಶದಿಂದ ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕಳೆದ 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದರಿಂದ ಬಿಜೆಪಿ- ಜೆಡಿಎಸ್ ನವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಲ್ಲಸಲ್ಲದ ಕುತಂತ್ರ ಮಾಡುತ್ತಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಸೋಲನುಭವಿಸಿದ ಕಾರಣಕ್ಕೆ ಹತಾಶೆಯಿಂದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರು ಜನರ ವಿಶ್ವಾಸಗಳಿಸಲು ವಾಮಮಾರ್ಗ ಅನುಸರಿಸುತ್ತಿದ್ದಾರೆ. ವಿಪಕ್ಷಗಳ ಈ ನಡೆ ಖಂದನೀಯ ಎಂದು ವಾಗ್ದಾಳಿ ನಡೆಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ