Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಡ ಪ್ರಭು ಶ್ರೀ ಕೆಂಪೇಗೌಡರ ಜಯಂತಿ ಉತ್ಸವ

Advertisement
ಹುಕ್ಕೇರಿ :-ನಾಡಪ್ರಭು ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ವ್ಯಾಪ್ತಿಯಲ್ಲಿ ಬರುವ ಯಲಹಂಕದ ಪಾಳೇಗಾರರಾಗಿದ್ದರು.ಹಂಪಿಯ ವೈಭವನ್ನು ಕಂಡು ಯಲಹಂಕವನ್ನು ದೊಡ್ಡ ನಗರವನ್ನಾಗಿ ನಿರ್ಮಾಣ ಮಾಡಬೇಕು ಎಂದು ಕನಸು ಕಂಡು ಬೆಂಗಳೂರು ಎಂಬ ಮಹಾನಗರ ನಿರ್ಮಾಣ ಮಾಡಿದರು ವಿಶ್ವದಲ್ಲೇ ಎಲ್ಲ ನಗರಗಳಲ್ಲಿ ಅತೀ ಹೆಚ್ಚು ಕೆರೆಗಳು ಇರುವುದು ಬೆಂಗಳೂರಿನಲ್ಲಿ ಮಾತ್ರ ಬೆಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರ ನಾಡಪ್ರಭು ಕೆಂಪೇಗೌಡರು ಎಂದು ಉಪನ್ಯಾಸಕರಾದ ಶ್ರೀಮತಿ ನಾಗಿಣಿ ಕೆ. ಸಿ. ಹಾಗೂ ತಶೀಲ್ದಾರ್ ಶ್ರೀಮತಿ ಮಂಜುಳಾ ನಾಯಕ ಅವರು ಹೇಳಲಾಯಿತು.\



ಸುಮಾರು 450 ವರ್ಷಗಳಷ್ಟು ಹಿಂದೆಯೇ ವ್ಯಾಪಾರಿಗಳನ್ನು ಕರೆತಂದು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟು ಅವರವರ ವೃತ್ತಿಗಳಿಗೆ ಅನುಸಾರವಾಗಿ ಪೇಟೆಗಳನ್ನು ನಿರ್ಮಿಸಿಕೊಟ್ಟು ನಗರವು ಬೆಳೆಯಲು ಅನುವು ಮಾಡಿಕೊಟ್ಟ ಕೀರ್ತಿ ಕೆಂಪೆಗೌಡರಿಗೆ ಸಲ್ಲುತ್ತದೆ.

ಕೆಂಪೇಗೌಡರು ನಿರ್ಮಿಸಿದ ಎಲ್ಲಾ ಪೇಟೆಗಳು ಇಂದಿಗೂ ಬೆಂಗಳೂರು ಮಾತ್ರವಲ್ಲದೆ ಇಡೀ ರಾಜ್ಯದ ವಾಣಿಜ್ಯ ವ್ಯವಹಾರದ ಮಹತ್ವವುಳ್ಳ ಪೇಟೆಗಳಾಗಿವೆ. ನಾಡಿನ ಇತಿಹಾಸದಲ್ಲಿ ಯಾವುದೇ ರಾಜರೂ ಸಹ ತಮ್ಮ ಅವಧಿಯಲ್ಲಿ ಇಷ್ಟು ಕೆರೆಗಳನ್ನು ಕಟ್ಟಿಸಿರುವುದು ಕಂಡುಬರುವುದಿಲ್ಲ. ಇದು ಕೆಂಪೇಗೌಡರ ಇವರ ಹೆಗ್ಗಳಿಕೆಯಾಗಿದೆ.

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಟ್ಟು ಓದಬೇಕು. ನಿಮ್ಮ ಗುರಿ, ನಿಮ್ಮ ಸಾಧನೆ ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಹೆಜ್ಜೆ ಹಾಕಬೇಕು. ಶಿಕ್ಷಣವೇ ನಿಮ್ಮ ಆಯುಧ ಉನ್ನತ ಶಿಕ್ಷಣ ಪಡೆದು ದೇಶಕ್ಕೆ ಕೊಡುಗೆ ನೀಡುವ ಮೂಲಕ ಸಾಧನೆ ಮಾಡಬೇಕು.



ಈ ಸಂದರ್ಭದಲ್ಲಿ,ಶ್ರೀ ಅಭಿನವ ಮಂಜುನಾಥ್ ಶ್ರೀಗಳು, ಶ್ರೀ ಮತಿ ಮಂಜುಳಾ ನಾಯಕ ತಶೀಲ್ದಾರರು ಹುಕ್ಕೇರಿ, ಮಹಾಂತೇಶ್ ಬಸಾಪುರೆ ಸಿ. ಪಿ. ಐ, ಪ್ರವೀಣ ಕಟ್ಟಿ ತಾಲೂಕ ಪಂಚಾಯತ್ ಕಾ. ನಿ. ಅಧಿಕಾರಿಗಳು ಹುಕ್ಕೇರಿ, ಶಶಿಧರ್ ಹೆಗ್ಡೆ ಎ. ಡಿ. ಎಲ್. ಆರ್. ಹುಕ್ಕೇರಿ, ಸವಿತಾ ಹಲಕಿ ಅಕ್ಷರ ದಾಸೋಹ ಹುಕ್ಕೇರಿ, ಹೊಳೆಪ್ಪಾ ಎಚ್. ಸಿ. ಡಿ. ಪಿ. ಓ. ಹುಕ್ಕೇರಿ, ಪ್ರಭಾವತಿ ಪಾಟೀಲ್ ಬಿ. ಇ. ಓ. ಹುಕ್ಕೇರಿ, ಎಸ್. ಆರ್. ಘಸ್ತಿ ಪ್ರಚಾರ್ಯರು ಡಿ. ಇಡಿ. ಕಾಲೇಜು, ನಾಗಿಣಿ ಕೆ. ಸಿ. ಪ್ರೌಢ ಶಾಲೆ ಅಮ್ಮಣಗಿ, ಶಿವಾನಂದ ಶೇಟ್ಟೆನ್ನವರ ನಿಲಯ ಪಾಲಕರು ಉಪಸ್ಥಿತರಿದ್ದರು.

ವರದಿ:-ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ