Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ

Advertisement
ಸವದತ್ತಿ : ತಾಲೂಕ ಪಂಚಾಯತ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಐಇಸಿ ಚಟುವಟಿಕೆಯಡಿ "ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ” ಅಭಿಯಾನದ ನಿಮಿತ್ಯ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಹಾಗೂ ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಶ್ರೀ ಆರ್ ಬಿ ರಕ್ಕಸಗಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಬಳಿಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಮಾತನಾಡಿ ಮನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕರ ಆಯವ್ಯಯದ ಸಿದ್ದತೆಗಾಗಿ ಮನರೇಗಾ ಯೋಜನೆಯ ಮಹತ್ವ ಮತ್ತು ಯೋಜನೆಯಡಿ ಕೈಗೊಳ್ಳಬಹುದಾದ ವಿವಿಧ ಕಾಮಗಾರಿಗಳ ಕುರಿತು ವ್ಯಾಪಕ ಪ್ರಚಾರ ಮಾಡುವ ಉದ್ದೇಶದಿಂದ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಲಾಗಿದ್ದು, ಸವದತ್ತಿ ತಾಲ್ಲೂಕಿನ 44 ಗ್ರಾಪಂಗಳ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲಿ ಉದ್ಯೋಗ ವಾಹಿನಿ ಜಾಗೃತಿ ರಥ ಸಂಚರಿಸಲಿದೆ ಎಂದರು.



ಇದೇ ವೇಳೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಮುದಾಯ & ವೈಯಕ್ತಿಕ ಕಾಮಗಾರಿಗಳ ಮಾಹಿತಿಯುಳ್ಳ ಕರಪತ್ರಗಳನ್ನು ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಬಿಡುಗಡೆಗೊಳಿಸಿದರು.

ಬಳಿಕ ಸಹಾಯಕ ನಿರ್ದೇಶಕರಾದ (ಗ್ರಾಉ) ಆರ್ ಬಿ ರಕ್ಕಸಗಿ ಅವರು ಮಾತನಾಡಿ ಮನರೇಗಾ ಯೋಜನೆಯ ಬಗ್ಗೆ ಗ್ರಾಮೀಣ ಜನರಿಗೆ ಮಾಹಿತಿಯನ್ನು ನೀಡಲು ಉದ್ಯೋಗ ವಾಹಿನಿ ಜಾಗೃತಿ ರಥದ ಮೂಲಕ ಪ್ರಚಾರ ಮಾಡಲಾಗುತ್ತಿದ್ದೆ, ಇ-ಡಿಮ್ಯಾಂಡ ಮೂಲಕ ಕೂಡಾ ಕ್ಯೂ-ಆರ್ ಕೋಡ್ ಬಳಸಿಕೊಂಡು ಕಾಮಗಾರಿಗಳ ಬೇಡಿಕೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಪ್ರಯೋಜನೆಯನ್ನು ಗ್ರಾಮೀಣ ಜನರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.



ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು (ಅಕ್ಷರ ದಾಸೋಹ) ಎಮ್ ಸಿ ವಸ್ತ್ರದ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಗ್ರಾಕುನೀ&ನೈ) ಬಿ ವಿ ಅಯ್ಯನಗೌಡರ, ಸಹಾಯಕ ನಿರ್ದೇಶಕರು (ಪಶುಸಂಗೋಪನೆ ಇಲಾಖೆ) ಅನಿಲ ಮರಲಿಂಗನವರ, ತಾಲೂಕಾ ಮಟ್ಟದ ಅಧಿಕಾರಿಗಳು, ವಿಷಯ ನಿರ್ವಾಹಕ ಮಲ್ಲಿಕಾರ್ಜುನ ಕಂಬಿ, ತಾಪಂ ಐಇಸಿ ಸಂಯೋಜಕ ಮಲೀಕಜಾನ ಮೋಮಿನ, ತಾಪಂ ಎಂಐಎಸ್ ಸಂಯೋಜಕ ನಾಗರಾಜ ಬೆಹರೆ, ತಾಪಂ ತಾಂತ್ರಿಕ ಸಂಯೋಜಕ ಮಹಾದೇವ ಕಾಮನ್ನವರ, ಆಡಳಿತ ಸಹಾಯಕಿ ಸಂಜನಾ ಮನವಾಡೆ, ಬಿಎಫ್ ಟಿ ಸುಧೀರಗೌಡ ಪಾಟೀಲ, ಮತ್ತು ತಾಪಂ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್