Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳವಡಿಯಲ್ಲಿ ನೈಸರ್ಗಿಕ ಕೃಷಿ ತರಬೇತಿ

Advertisement
ಮಲ್ಲಮ್ಮನ ಬೆಳವಡಿ: ನೈಸರ್ಗಿಕ ಕೃಷಿ ತರಬೇತಿ ನೈಸರ್ಗಿಕ ಕೃಷಿ ಕುರಿತು ಅರಿವು ಮೂಡಿಸುವ ಹಾಗೂ ತರಬೇತಿ ಕಾರ್ಯಕ್ರಮವನ್ನು ಬೆಳವಡಿ ಗ್ರಾಮದ ಹಮ್ಮಿಕೊಳ್ಳಲಾಯಿತು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಕಾರಿಮನಿ ಅವರು ವಹಿಸಿಕೊಂಡಿದ್ದರು. ಉದ್ಘಾಟಕರಾಗಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಬಸವರಾಜ ದಳವಾಯಿ ಅವರು ಆಗಮಿಸಿದ್ದರು.



ಪ್ರಸ್ತಾವಿಕವಾಗಿ ಆತ್ಮ ತಾಲೂಕಾ ತಾಂತ್ರಿಕ ವ್ಯವಸ್ಥಾಪಕರಾದ ಶ್ರೀ ಚಂದ್ರಕಾಂತ್ ಮರಡಿ ಅವರು ಕಾರ್ಯಕ್ರಮದ ಕುರಿತಾಗಿ NMNF ಯೋಜನೆಯ ಹಾಗೂ ನೈಸರ್ಗಿಕ ಕೃಷಿ ಕುರಿತು ಬೆಳಕು ಚೆಲ್ಲಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೆಎಲ್ಇ ಕೆವಿಕೆ ಮತ್ತಿಕೊಪ್ಪದ ನೈಸರ್ಗಿಕ ಕೃಷಿ ನೋಡಲ್ ವಿಜ್ಞಾನಿಗಳಾದ ಶ್ರೀ ಎಸ್ ಎಂ ವಾರದ ಸರ್ ಅವರು ನೈಸರ್ಗಿಕ ಕೃಷಿ ಕುರಿತು ಸಂಪೂರ್ಣ ಮಾಹಿತಿ ನೀಡಿದರು.



ಪೂಚರ್ ಬೈಯೊಟೆಕ್ ಹಾಗೂ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮಜೀವಿ ತಜ್ಞರಾದ ಡಾ ಮಂಜುನಾಥ್ ಅವರು ಕೃಷಿಯಲ್ಲಿ ಸೂಕ್ಷ್ಮ ಜೀವಿಗಳು ಹಾಗೂ ಜೈವಿಕ ಗೊಬ್ಬರಗಳ ಕುರಿತು ಮಾಹಿತಿ ನೀಡಿದರು. ಕೆವಿಕೆ ಮತ್ತಿಕೊಪ್ಪದ ಸಸ್ಯ ಸಂರಕ್ಷಣಾ ತಜ್ಞರಾದ ಶ್ರೀ ಎಸ್ ಎಸ್ ಹಿರೇಮಠ ಅವರು ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಡಿ ಎಣ್ಣೆ ಕಾಳು ಬೆಳೆಗಳ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ನೀಡಿದರು.



ನಂತರ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಬಸವರಾಜ್ ದಳವಾಯಿ ಅವರು ಮಾತನಾಡಿ ಇಲಾಖೆ ಯೋಜನೆಗಳ ಕುರಿತು ಹಾಗೂ ಸಮಗ್ರ ಕೃಷಿ ಕುರಿತು ಮಾಹಿತಿ ನೀಡಿದರು.ಸಾವಯುವ ಹಾಗೂ ನೈಸರ್ಗಿಕ ಕೃಷಿಕರು ಶ್ರೀ ಮಂಜುನಾಥ ತಹಶೀಲ್ದಾರ್ ಅವರು ತಮ್ಮ ಕೃಷಿ ಅನುಭವ ತಾವು ಮಾಡಿರುವ ಅನುಸರಿಸಿರುವ ಸಾವಯುವ ಕೃಷಿ ಪದ್ಧತಿಗಳ ಕುರಿತು ಮಾಹಿತಿ ನೀಡಿದರು.ನಂತರ ಪಂಚಾಯತಿ ಅಧ್ಯಕ್ಷರಾದ ಚಂದ್ರಶೇಖರ್ ಕಾರಿಮನಿ ಅವರು ಮಾತನಾಡಿ ಕೃಷಿ ವಿಜ್ಞಾನಿಗಳು ಹೇಳುವ ಸೂಚನೆಗಳನ್ನು ಎಲ್ಲ ರೈತರು ತಮ್ಮ ಕ್ಷೇತ್ರಗಳಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.



ಪಂಚಾಯತ್ ಸದಸ್ಯರು ಹಾಗೂ ವೇದಮೂರ್ತಿ ಬಸಯ್ಯ ವಿರಕ್ತಮಠ ಸ್ವಾಮಿಗಳು ರೈತರಿಗೆ ಕಾರ್ಯಕ್ರಮಗಳ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ತಮ್ಮ ಹಿತವಚನಗಳನ್ನು ತಿಳಿಸಿದರು,ಹಾಗೂ ಬೆಳವಡಿ ಗ್ರಾಮದ ರೈತ ಬಾಂಧವರು ಸಹಾಯಕ ಕೃಷಿ ನಿರ್ದೇಶಕರಿಗೆ ಹಾಗೂ ಸಾವಯವ ಕೃಷಿಕ ಮಂಜುನಾಥ್ ತಹಶೀಲ್ದಾರ್ ಅವರನ್ನು ಸನ್ಮಾನಿಸಿದರು.ಕಾರ್ಯಕ್ರಮವನ್ನು ಪ್ರಗತಿಪರ ರೈತರಾದ ಬಾಬು ಖಂಡೋಜಿ ಅವರು ನಿರೂಪಿಸಿದರು.ಕೃಷಿ ಅಧಿಕಾರಿಗಳಾದ ಯಮನಪ್ಪ ಸರ್ ವಂದನಾರ್ಪಣೆ ಕೈಗೊಂಡರು , ಕಾರ್ಯಕ್ರಮದಲ್ಲಿ ಎಸ್ಎಫ್ ಪೂಜಾರ್ ಸರ್ ಮಾಜಿ ಝೆಡ್ಪಿ ಈರಣ್ಣ ಕರಿಕಟ್ಟಿ ಅವರು ಪಂಚಾಯಿತಿ ಹಾಗೂ ಪಿ ಕೆ ಪಿ ಎಸ್ ನ ಸದಸ್ಯರು ಕೃಷಿ ಸಖಿ,ಪತ್ರಿಕೋದ್ಯಮದವರು ,ಸಾವಯುವ ಉತ್ಪಾದಿಸುವ ಕಂಪನಿಗಳಾದ ಸರ್ವಶ್ರೀ ಪ್ರೈವೇಟ್ ಲಿಮಿಟೆಡ್ ಹಾಗೂ ಡಾ.ಭೂಮ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಭಾಗವಹಿಸಿದ್ದರು.



ವರದಿ: ದುಂಡಪ್ಪ ಹೂಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ