Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಕೃತಿಕ ಸೌಹಾರ್ದತೆ ತುರ್ತು ಅಗತ್ಯ: ಉಪ ರಾಷ್ಟ್ರಪತಿ ಜಗದೀಪ್ ಧನಕರ್

Advertisement
ಕಾರವಾರ: ವೈದಿಕ ಯುಗದಿಂದಲೂ ಪರಿಸರ ಮತ್ತು ಅರ್ಥ ವ್ಯವಸ್ಥೆ ಪರಸ್ಪರ ಸಾಗಿದೆ. ಪರಿಸರ ನಾಶ ಮಾಡಿ ಅಭಿವೃದ್ಧಿ ಚಟುವಟಿಕ ನಡೆಸುವ ಬದಲು ಪ್ರಾಕೃತಿಕ ಸೌಹಾರ್ದ ತುರ್ತು ಅಗತ್ಯ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಪ್ರತಿಪಾದಿಸಿದರು.

ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ಸೋಮವಾರ 'ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ' ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ನೈಸರ್ಗಿಕ ಸಂಪನ್ಮೂಲ ಬಳಸಿಕೊಂಡು ಅಭಿವೃದ್ಧಿ ಹೊಂದುವ ಗ್ರಾಹಕರು ನಾವಲ್ಲ. ಅವುಗಳನ್ನು ಮುಂದಿನ ಪೀಳಿಗೆಗೂ ಉಳಿಸಿಕೊಂಡು ಸಾಗುವತ್ತ ಯೋಚಿಸಬೇಕು ಎಂದು ಸಲಹೆ ನೀಡಿದರು.
ಪಶ್ಚಿಮ ಘಟ್ಟ ಜಗತ್ತಿನಲ್ಲೇ ಶ್ರೀಮಂತ ಜೀವ ವೈವಿಧ್ಯ ಹೊಂದಿರುವ ತಾಣ. ಇಂತಹ ವಾತಾವರಣದಲ್ಲಿ ವಿದ್ಯಾರ್ಥಿಗಳು ಗೋಡೆಯ ನಡುವೆ ಕಲಿಯುವುದಕ್ಕಿಂತ ವಿಸ್ತಾರ ಪ್ರದೇಶದಲ್ಲಿ ಕಲಿಯಬಹುದು ಎಂದರು. ಏಲಕ್ಕಿ, ದಾಲ್ಕಿನ್ನಿ, ಕಾಳುಮೆಣಸು ಸೇರಿದಂತೆ ಅನೇಕ ಮಸಾಲೆ ಉತ್ಪನ್ನ ಬೆಳೆಯುವ ಫಲವತ್ತಾದ ಭೂಮಿ ಇದಾಗಿದೆ. ಇಲ್ಲಿನ ಜನರು ಪರಿಸರದೊಂದಿಗೆ ಬದುಕುತ್ತಿದ್ದಾರೆ.

ಪ್ರಕೃತಿ ಕೇವಲ ಮಾನವನಿಗೆ ಸೀಮಿತವಾಗಿಲ್ಲ ಎಂಬ ಸತ್ಯವನ್ನು ಅರಿತುಕೊಳ್ಳಿ. ಪ್ರಾಣಿ ಪಕ್ಷಿಗಳಿಗೂ ಅದು ಮೀಸಲಾಗಿದೆ. ಈಗಿನ ಪೀಳಿಗೆ ಈ ಸತ್ಯದೊಂದಿಗೆ ಅಧ್ಯಯನ ನಡೆಸುತ್ತ, ಮುಂದಿನ ಪೀಳಿಗೆಗೂ ಅರಿವು ಮೂಡಿಸಬೇಕು ಎಂದರು.

ಅರಣ್ಯ ಶ್ವಾಸಕೋಶದಂತೆ, ಶ್ವಾಸಕೋಶ ಸರಿಯಾಗಿದ್ದರೆ ಉಸಿರಾಡಬಹುದು. ವಾತಾವರಣದ ಏರುಪೇರು ಜಗತ್ತಿಗೆ ಎಚ್ಚರಿಕೆ ನೀಡುತ್ತಿದೆ. ಈ ಸವಾಲು ಎದುರಿಸಲು ಪರಿಸರ ಉಳಿಸಬೇಕು. ಮನುಷ್ಯನ ಅತಿಯಾಸೆಗೆ ಪರಿಸರ ನಾಶವಾಗುತ್ತಿದ್ದರೆ ಭೂಮಿ ತಾಯಿ ಕ್ಷಮೆ ನೀಡಲಾರಳು ಎಂದು ಎಚ್ಚರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ