ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ವಿಪಕ್ಷಗಳಿಂದ ರಾಜ್ಯಸಭೆಯಲ್ಲಿ ಇಂದು ಕೂಡ ಧರಣಿ, ಪ್ರತಿಭಟನೆ ಮುಂದುವರೆಸಲಾಗಿತ್ತು.
ಈ ಹಿನ್ನಲೆಯಲ್ಲಿ ವಂದೇ ಮಾತರಂ ಮಸೂದೆ ಮಂಡನೆ ಬಳಿಕ ರಾಜ್ಯಸಭೆಯ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.
ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಸಂಬಂಧ ಹೋರಾಟ ಮುಂದುವರೆದಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವ್ಯಾಪಕ ಒತ್ತಾಯ ಕೇಳಿ ಬಂದಿದೆ.
ಇದರ ನಡುವೆಯೂ ಸಂಸತ್ ಕಲಾಪ ನಡೆಯುತ್ತಿತ್ತು. ಈ ಕಲಾಪಕ್ಕೆ ವಿಪಕ್ಷಗಳು ವಿದ್ಯಾರ್ಥಿಗಳ ಪರ ನಿಂತಿದ್ದರಿಂದ ವ್ಯಾಪಕ ಅಡ್ಡಿ ಉಂಟಾಗಿತ್ತು.
ರಾಜ್ಯಸಭೆಯಲ್ಲಿ ವಂದೇ ಮಾತರಂ ಮಸೂದೆ ಮಂಡನೆ ಬಳಿಕ ವಿಪಕ್ಷಗಳ ಗದ್ದಲದ ಕಾರಣದಿಂದಾಗಿ ಸ್ಪೀಕರ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದ್ದಾರೆ.


