LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News

ನೇಪಾಳದಲ್ಲಿ ಭೀಕರ ಪ್ರವಾಹ : ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,482 ಮಂದಿ ನಾಪತ್ತೆ

Advertisement

ನೇಪಾಳ : ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಭೋಟೆಕೋಶಿ-ತ್ರಿಶೂಲಿ ಪ್ರಕೃತಿ ವಿಕೋಪದಿಂದಾಗಿ ಜಲಪ್ರಳಯ ಹಾಗೂ ಹಿಮಪಾತ ಸಂಭವಿಸಿದ್ದು, ಉಭಯ ಪ್ರದೇಶಗಳಲ್ಲಿ ಹಾಹಾಕಾರ ಸೃಷ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಈವರೆಗೆ ಬರೋಬ್ಬರಿ 626 ಮಂದಿ ಮೃತಪಟ್ಟಿದ್ದು, 2,482ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

ನೇಪಾಳವೊಂದರಲ್ಲೇ ಮೃತರ ಸಂಖ್ಯೆ 579ಕ್ಕೆ ಏರಿಕೆಯಾಗಿದ್ದು, 1,924 ಜನರು ಕಣ್ಮರೆಯಾಗಿದ್ದಾರೆ. ಇತ್ತ ಟಿಬೆಟ್‌ನಲ್ಲಿ 5 ಜನರು ಮೃತಪಟ್ಟು, 558 ಮಂದಿ ನಾಪತ್ತೆಯಾಗಿದ್ದಾರೆ. 

ಗ್ರಾಮೀಣ ಪ್ರದೇಶಗಳು ಹಾಗೂ ಜಲವಿದ್ಯುತ್ ಯೋಜನೆಗಳ ಕೇಂದ್ರಗಳು ಸಂಪೂರ್ಣ ಸಂಪರ್ಕ ಕಡಿತಗೊಂಡಿದ್ದು, ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಸ್ಥಳೀಯ ಜಲವಿದ್ಯುತ್ ಯೋಜನೆಯೊಂದರ 400ಕ್ಕೂ ಹೆಚ್ಚು ಸಿಬ್ಬಂದಿ ಸುರಂಗ ಮಾರ್ಗದಲ್ಲಿ ಸಿಲುಕಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಹಾರ ಮತ್ತು ನೀರಿಲ್ಲದೆ ಪರದಾಡುತ್ತಿದ್ದಾರೆ. 

ಘಟನಾ ಸ್ಥಳದಲ್ಲಿ ಪ್ರವಾಹ ಮತ್ತು ಹಿಮಪಾತದ ಭೀತಿ ಮುಂದುವರಿದಿರುವುದು ರಕ್ಷಣಾ ಪಡೆಯ ಆತಂಕವನ್ನು ಹೆಚ್ಚಿಸಿದೆ.

ಕಡಿದಾದ ಗುಡ್ಡಗಾಡು ಪ್ರದೇಶಗಳಲ್ಲಿ ರಸ್ತೆಗಳು ಕೊಚ್ಚಿಹೋಗಿರುವುದರಿಂದ ಪರಿಹಾರ ಸಾಮಗ್ರಿ ತಲುಪಿಸುವುದು ಸವಾಲಾಗಿ ಪರಿಣಮಿಸಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಪ್ಟೆಂಬರ್ 1ರಿಂದ 10ರವರೆಗೆ ಬಿಜೆಪಿ ಬಳ್ಳಾರಿ ಪಾದಯಾತ್ರೆ: ರೂಟ್ ಮ್ಯಾಪ್ ರೆಡಿ9 ಗಂಟೆಯಲ್ಲಿ 40 ಎಕರೆ ಎಡೆ ಹೊಡೆದ ವಿಜಯಪುರದ ಎತ್ತುಗಳುಪ್ರೇಯಿಸಿ ಮೊಬೈಲ್‌ ನಂಬರ್‌ ಬ್ಲಾಕ್‌ಗೆ ಹಾಕಿದ್ದಕ್ಕೆ ಟವರ್ ಕುಳಿತ ಯುವಕ : ಪ್ರೇಯಸಿ ಬರುತ್ತಿದ್ದಂತೆ ಇಳಿದಅನುಮಾನಾಸ್ಪದವಾಗಿ ಯುವಕ ಸಾವು : ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಪತ್ತೆ ಪಾಕ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಇಂಗ್ಲೆAಡ್ಥೈಲೇನ್ಡ ಗೆ 160 ರನ್ ಗಳ ಗೆಲುವಿನ ಗುರಿ ಸರ್ರೆ ತಂಡಕ್ಕೆ ತಾತ್ಕಾಲಿಕ ಗುತ್ತಿಗೆ ಪಡೆದ ಅಕಿಬ್ ನಬಿ ನಾಲ್ಕೈದು ಜನರಿಗೆ ಡಿಸಿಎಂ ಮಾಡಿದರೆ ಆ ಹುದ್ದೆಯ ಘನತೆ ಉಳಿಯುವುದಿಲ್ಲ : ಸತೀಶ್ ಜಾರಕಿಹೊಳಿಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ​​ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ​​ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್