Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಗಂಗೆ ಕ್ಷೇತ್ರದಲ್ಲಿ ಶ್ರೀ ಅರಬಿಂದೋ ಕಾಲೇಜಿನಿಂದ NSS ಸೇವಾ ಶಿಬಿರ

Advertisement
ಬೆಂಗಳೂರು : ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಬೆಂಗಳೂರಿನ ರಾಜಾಜಿನಗರದ ಪ್ರತಿಷ್ಠಿತ ಶ್ರೀ ಅರಬಿಂದೋ ಪದವಿ ಕಾಲೇಜಿನ (ಎನ್ಎಸ್ಎಸ್)NSS ಘಟಕದ ವತಿಯಿಂದ ದಿನಾಂಕ 06 ಫೆಬ್ರವರಿ13ರ ವರೆಗೆ (ಎನ್ಎಸ್ಎಸ್) NSS ವಾರ್ಷಿಕ ಸೇವಾ ಶಿಬಿರವನ್ನು ನೆಲಮಂಗಲ ತಾಲ್ಲೂಕಿನ ಶಿವಗಂಗೆ ಕ್ಷೇತ್ರದ ಕಂಬಾಳು ಗ್ರಾಮದ ಶ್ರೀ ಮೇಲಣಗವಿ ಮಠದಲ್ಲಿ ಆಯೋಜಿಸಲಾಗಿತ್ತು.



ಶಿಬಿರದ ಮೊದಲ ದಿನ ಶ್ರೀ ಮಠದ ಪೂಜ್ಯ ಗುರುಗಳಾದ ಶ್ರೀ ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಶಿಬಿರವನ್ನು ಉದ್ಘಾಟಿಸಿದರು ಹಾಗೂ ರಾಜಾಜಿನಗರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಟಿ.ಎನ್ ರವಿಪ್ರಕಾಶ್, ಕಾರ್ಯದರ್ಶಿ ರಮೇಶ್ ಚಂದ್ರ ಹೊಂಗಲ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಶೈಲಜಾ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ದುರ್ಗಾ ಪ್ರಸಾದ್ ಉಪಸ್ಥಿತರಿದ್ದರು.
ಪ್ರತಿದಿನ ಉಪನ್ಯಾಸ ಕಾರ್ಯಕ್ರಮಗಳು, ಶ್ರಮದಾನ ಚಟುವಟಿಕೆಗಳು, ಧ್ವಜಾರೋಹಣ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತಿದ್ದವು.

ಈ ಶಿಬಿರದಿಂದ ವಿದ್ಯಾರ್ಥಿಗಳು ಶಿಸ್ತು, ಸಮಯ ಪರಿಪಾಲನೆ, ಸೇವಾ ಮನೋಭಾವ, ನಾಯಕತ್ವ ಗುಣಗಳು, ಸಂವಹನ ಕೌಶಲ್ಯ, ಪರಿಸರದ ಬಗ್ಗೆ ಕಾಳಜಿ, ಗ್ರಾಮೀಣ ಪ್ರದೇಶದ ಬಗ್ಗೆ ಅರಿವು ಹಾಗೂ ಕಾಳಜಿ, ರಾಷ್ಟ್ರೀಯ ಭಾವೈಕ್ಯತೆ ವಿಷಯಗಳನ್ನು ಕಲಿತುಕೊಂಡಿರುವುದಾಗಿ ಸಮಾರೋಪ ಕಾರ್ಯಕ್ರಮದಲ್ಲಿ ತಿಳಿಸಿದರು.

ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ