ಬಾಗಲಕೋಟೆ : ಬೆಂಗಳೂರಿನ ವಿಧಾನಸೌಧದಲ್ಲಿ ಹಮ್ಮಿಕೊಂಡಿರುವ ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಸಣ್ಣ ಕೈಗಾರಿಕೆ ಇಲಾಖೆ ಕಚೇರಿ ವಿಧನಸೌಧದಲ್ಲಿ ಕೊಟ್ಟಡಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಿ ಅಧಿಕೃತವಾಗಿ
ಚಾಲನೆ ನೀಡಿದರು.
ಕರ್ನಾಟಕ ಸರ್ಕಾರದಲ್ಲಿ ಇತ್ತೀಚೆಗೆ ಸಚಿವರಿಗೆ ಖಾತೆ ಹಾಗೂ ಕೊಠಡಿಗಳನ್ನು ಹಂಚಿಕೆ ಮಾಡಿದ ಬೆನ್ನಲ್ಲೇ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಮ್ಮ ಕಚೇರಿಯನ್ನು ಪ್ರವೇಶಿಸಿದರು ಸಾಮಾನ್ಯವಾಗಿ ರಾಜಕಾರಣದಲ್ಲಿ ಶುಭ ಮುಹೂರ್ತ ಹಾಗೂ ವಾಸ್ತು ನಿಯಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಸಚಿವರ ತಮ್ಮ ಕುಟುಂಬದವರೊಂದಿಗೆ ಕಚೇರಿಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಅಧಿಕಾರ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಪೂಜ್ಯರಾದ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಬಾಗಲಕೋಟೆ ಜಿಲ್ಲೆಯ
ಸಿದ್ಧನಕೊಳ್ಳ ನಿರಂತರ ಅನ್ನ ದಾಸೋಹ ಹಾಗೂ ಕಲಾ ಪೋಷಕ ಮಠ, ಕುಟುಂಬಸ್ಥರು, ಗಣ್ಯರು ಹಾಗೂ ಕಾರ್ಯಕರ್ತರು ಬಾಗವಹಿಸಿದರು.
ವರದಿ : ಬಸವರಾಜ ಪೂಜಾರಿ


