Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತಯಂತ್ರಗಳೊಂದಿಗೆ ಮತಗಟ್ಟೆಗೆ ತೆರಳಿದ ಅಧಿಕಾರಿಗಳು

Advertisement
ಸಿರುಗುಪ್ಪ : -ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ವಿವೇಕಾನಂದ ಪಬ್ಲಿಕ್ ಶಾಲೆಯ ಆವರಣದಲ್ಲಿ ಸೋಮವಾರ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ ಜರುಗಿತು.



ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ವ್ಯಾಪ್ತಿಗೆ ಬರುವ ಸಿರುಗುಪ್ಪ ವಿಧಾನಸಭೆ ಎಸ್.ಟಿ.ಮೀಸಲು ಕ್ಷೇತ್ರದ ಮತಗಟ್ಟೆಗಳಿಗೆ ಮತಯಂತ್ರಗಳು, ಅಗತ್ಯ ಪರಿಕರಗಳು, ಹಾಗೂ ಚುನಾವಣಾ ಸಿಬ್ಬಂದಿ ನಿಯೋಜನಾ ಕಾರ್ಯ ಜರುಗಿತು.

ಮತಗಟ್ಟೆಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮತಗಟ್ಟೆಯ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸಹಾಯಕ ಚುನಾವಣಾಧಿಕಾರಿ ಡಾ.ತಿರುಮಲೇಶ ಅವರು ಸೂಚನೆ ನೀಡಿದರು.

ಮತದಾನಕ್ಕೆ ಕೇವಲ ಒಂದು ದಿನ ಬಾಕಿಯಿದ್ದು, ಎಲ್ಲವೂ ಸುಸೂತ್ರವಾಗಿ ನಡೆಯಲು ಚುನಾವಣಾ ಆಯೋಗ, ಜಿಲ್ಲಾ ಮತ್ತು ತಾಲೂಕಾಡಳಿತದಿಂದ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆಂದರು.

ತಹಶೀಲ್ದಾರ್ ಶಂಷಾಲಂ ಸುದ್ದಿಗಾರರೊಂದಿಗೆ ಮಾತನಾಡಿ ತಾಲೂಕಿನ ಗ್ರಾಮೀಣ ವ್ಯಾಪ್ತಿಯ 114 ಹಾಗೂ ಪಟ್ಟಣ ಹಾಗೂ ನಗರ ಸೇರಿದಂತೆ 43 ಸೇರಿ ಒಟ್ಟು 228 ಮತಗಟ್ಟೆಗಳಲ್ಲಿ 1051 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.



ಚುನಾವಣಾ ಕಾರ್ಯಕ್ಕೆಂದು 34 ಕೆ.ಎಸ್.ಆರ್.ಟಿ.ಸಿ ಬಸ್ಸುಗಳು, 17 ಶಾಲಾ ಮಿನಿ ಬಸ್ಸುಗಳು, ಹಾಗೂ 10 ಟ್ರ್ಯಾಕ್ಸ್ ಗಳ ಮೂಲಕ ಮತಗಟ್ಟೆಗಳಿಗೆ ತಲುಪಿಸಲಾಗುತ್ತಿದೆಂದು ತಿಳಿಸಿದರು.

ಬಿರು ಬಿಸಿಲಿನಿಂದಾಗಿ ಮರಗಿಡಗಳ ನೆರಳಿನಲ್ಲಿ ಸಿಬ್ಬಂದಿಗಳು ಮತದಾನಕ್ಕೆ ಅಗತ್ಯವಿರುವ
ಯಂತ್ರಗಳು, ಇನ್ನಿತರ ಪರಿಕರಗಳನ್ನು ಜೋಡಿಸಿಕೊಂಡು ತಮ್ಮ ವಾಹನಗಳತ್ತ ತೆರಳುತ್ತಿರುವ ದೃಶ್ಯ ಕಂಡುಬಂದಿತು.

ವರದಿ ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ