ಬೆಂಗಳೂರು: ೧೨ನೇ ಶತಮಾನದ ಮಹಾನ್ ಚೇತನ ಸುಧಾರಕರು ತತ್ವ ಜ್ಞಾನಿ ಹಾಗೂ ವಚನಕಾರರು ಕಾಯಕ ಯೋಗಿ "ಬಸವ ಜಯಂತಿ ಅಂಗವಾಗಿ |ಬಸವಶ್ರೀ ಕಾಯಕ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ,ಬಸವಶ್ರೀ ಕಲಾ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಮತ್ತು ಸಾಂಸ್ಕೃತಿಕ ಉತ್ಸವವನ್ನು ನಾಟ್ಯ ಮಯೂರಿ ನೃತ್ಯ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷೆ ವಿದೂಷಿ ಪ್ರೇಮಾಂಜಲಿ ಆಚಾರ್ಯ ಉಪನ್ಯಾಸಕರು ಇವರ ನೇತೃತ್ವದಲ್ಲಿ ದಿನಾಂಕ 23-05-2026ರಂದು ಶನಿವಾರ ಸಾಂಸ್ಕೃತಿಕ ಮತ್ತು ಶ್ರೇಷ್ಠ ಸಾಧಕರಿಗೆ ಪ್ರಶಸ್ತಿ ಪ್ರದಾನವನ್ನು ಬೆಂಗಳೂರು ನಗರ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರ ಪಕ್ಕದ ನಯನ ಸಭಾಂಗಣದಲ್ಲಿ ಜರುಗಲಿದ್ದು.
ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ. ಶಂಕರ್ ಬಿದರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ಸುಧಾಕರ್ ಎಸ್ ಜಡಗಿ, ಚಿಂತಕರು ವಾಗ್ಮಿಗಳು ಬುದ್ದಿಜೀವಿಗಳು ಮತ್ತು ರಾಷ್ಟ್ರೀಯ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ ಸಂಗನ ಬಸಪ್ಪ ಬಿರಾದಾರ್ ಮತ್ತು ನಾಟ್ಯ ಮಯೂರಿ ನೃತ್ಯ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷೆ ವಿದೂಷಿ ಪ್ರೇಮಾಂಜಲಿ ಆಚಾರ್ಯ ಇವರುಗಳ ಸಮ್ಮುಖದಲ್ಲಿ ಅಯ್ಯಣ್ಣ ಮಾಸ್ಟರ್ ಅವರಿಗೆ ಬಸವಶ್ರೀ ಕಾಯಕ' ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷೆ ಪ್ರೇಮಾಂಜಲಿ ಆಚಾರ್ಯ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ವರದಿ : ಅಯ್ಯಣ್ಣ ಮಾಸ್ಟರ್


