Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೋಳಿ ಹಬ್ಬದ ದಿನ ಕೂಲೆಯಾದ ಮೂವರು ಬಿಹಾರಿಗಳು

Advertisement
ಬೆಂಗಳೂರು : ಹೋಳಿ ಹಬ್ಬದ ಸಂಭ್ರಮವು ಹುಚ್ಚಾಟಕ್ಕೆ ತಿರುಗಿ ಮೂವರ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಬಿಹಾರ ಮೂಲದ ಅನ್ಸು(22) ರಾಧೆ ಶ್ಯಾಮ್(23) ಹಾಗೂ ದೀಪು ಮೃತ ದುರ್ದೈವಿಗಳಾಗಿದ್ದಾರೆ.

ಬಿಹಾರ ಮೂಲದ 6 ಮಂದಿ ಕೂಲಿ ಕಾರ್ಮಿಕರು ನಿನ್ನೆಯಿಂದ ಹೋಲಿ ಆಚರಣೆಯಲ್ಲಿ ತೊಡಗಿಕೊಂಡಿದ್ದರು.ಬಳಿಕ ಮದ್ಯಸೇವನೆ ಮಾಡಿ ಸರ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಫೋರ್‌ ವಾಲ್‌ ಕಟ್ಟಡದಲ್ಲಿ ಮಲಗಲೆಂದು ತೆರಳಿದ್ದರು.

ಈ ವೇಳೆ ಅವರವರಲ್ಲೇ ಜಗಳ ನಡೆದಿತ್ತು. ಕುಡಿದ ಅಮಲಿನಲ್ಲಿದ್ದ ಯುವಕರು ಮೂವರನ್ನು ಹತ್ಯೆಗೈದಿದ್ದಾರೆ. ಮೂರನೇ ಮಹಡಿಯಲ್ಲಿ ಒಂದು ಕೋಣೆಯಲ್ಲಿ ಎರಡು ಶವ ಮತ್ತೊಂದು ಕೋಣೆಯಲ್ಲಿ ಒಂದು ಶವ ಪತ್ತೆಯಾಗಿದೆ.

ಕೂಡಲೇ ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಓರ್ವ ಅಪರಾಧಿಯನ್ನು ವಶಕ್ಕೆ ಪಡೆದಿದ್ದಾರೆ. ಮಿಕ್ಕ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ಫೋರೆನ್ಸಿಕ್‌ ತಜ್ಞರು ಹಾಗೂ ಶ್ವಾನದಳದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಪರಾಧಿಗಳ ಜಾಡು ಕಂಡು ಹಿಡಿಯುವಲ್ಲಿ ನಿರತರಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ ಸಿ.ಕೆ ಬಾಬಾ ಮಾತನಾಡಿ, ಇದೊಂದು 14 ಮಹಡಿಯ ನಿರ್ಮಾಣ ಹಂತದಲ್ಲಿರುವ ಕಟ್ಟಡವಾಗಿದೆ. ಸಂಜೆಯಷ್ಟೇ ಈ ಬಗ್ಗೆ ನಮಗೆ ಮಾಹಿತಿ ದೊರೆತಿದೆ.ಒಟ್ಟಾರೆ ನಮಗೆ ಮೂರು ಶವಗಳು ದೊರೆತಿದ್ದು, ಇವರೆಲ್ಲರೂ ಪಂಬ್ಲಿಂಗ್‌ ಮತ್ತಿತರ ಕೆಲಸದಲ್ಲಿದ್ದರೆಂದು ತಿಳಿದುಬಂದಿದೆ. ಹೋಳಿ ಹಬ್ಬದ ಪ್ರಯುಕ್ತ ಮೂರು ದಿನ ರಜೆ ನೀಡಲಾಗಿತ್ತು.

ಈ ವೇಳೆ ಮೂವರೂ ತಮ್ಮ 3-4 ಮಂದಿ ಸ್ನೇಹಿತರೊಂದಿಗೆ ಮದ್ಯದ ಪಾರ್ಟಿ ಆಯೋಜಿಸಿದ್ದರು. ಬಂದಿದ್ದವರ ಪೈಕಿ ಒಬ್ಬಾತ ಗೆಳೆಯನ ಅಕ್ಕನ ಜೊತೆಗೆ ಫೋನಿನಲ್ಲಿ ಮಾತನಾಡಿದ್ದೇ ಜಗಳಕ್ಕೆ ಕಾರಣವಾಗಿದ್ದು , ಮೂವರು ಸ್ಥಳದಲ್ಲಿದ್ದ ರಾಡ್‌ ಮತ್ತು ಬಾಟಲ್‌ ಗಳಿಂದ ಹಲ್ಲೆ ನಡೆಸಿದ್ದಾರೆ.

ನಾವು ಬಂದಾಗ ಇಬ್ಬರು ಮೃತಪಟ್ಟಿದ್ದರು. ಒಬ್ಬನನ್ನು ಆಂಬುಲೆನ್ಸ್‌ ನಲ್ಲಿ ಹಾಕುವಾಗ ಮೃತಪಟ್ಟಿದ್ಧಾನೆ. ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಲಾಗಿದ್ದು, ಶೀಘ್ರದಲ್ಲಿಯೇ ಎಲ್ಲರನ್ನೂ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ