ಚಡಚಣ: ಕೃಷಿ ಕ್ಷೇತ್ರದಲ್ಲಿ ವಿನೂತನ ತಂತ್ರಜ್ಞಾನ ಅಳವಡಿಕೆ, ಹೊಸ ಅನ್ವೇಷಣೆ, ಸೃಜನಾತ್ಮಕ ಕಾರ್ಯಗಳು ಹಾಗೂ ಗಮನಾರ್ಹ ಸಾಧನೆ ಮಾಡಿದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ನೀಡಲಾಗುವ ಕೃಷಿ ಪಂಡಿತ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಮತ್ತು ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ನ ಸಿಟಿಜನ್ ಲಾಗಿನ್, ರೈತರ ಸಂಪರ್ಕ ಕೇಂದ್ರಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳ ಮೂಲಕ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು.
ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಯ ಮುದ್ರಿತ ಪ್ರತಿಯನ್ನು ಸಂಬಂಧಿಸಿದ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಉಪ ಕೃಷಿ ನಿರ್ದೇಶಕರಾದ ಶ್ರೀ ಚಂದ್ರಕಾಂತ ಪವಾರ ತಿಳಿಸಿದ್ದಾರೆ.
ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.
ವರದಿ : ಉಮಾಶಂಕರ ಕ್ಷತ್ರಿ


