ಪಾಕಿಸ್ತಾನದ ಮೇಲೆ ದಾಳಿ ನಡೆಸಲು ಸರ್ಕಾರ ತೆಗೆದುಕೊಳ್ಳುವ ಯಾವುದೇ ಕ್ರಮವನ್ನು ಪ್ರತಿಪಕ್ಷಗಳು ಬೆಂಬಲಿಸಿದ್ದವು .ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿ ಮತ್ತಿತರರು ಹಾಜರಿರಲಿದ್ದಾರೆ.
ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿವರಿಸಲಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಭಯೋತ್ಪಾದಕ ಶಿಬಿರಗಳ ಮೇಲೆ ಭಾರತವು ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಸರಣಿ ನಿಖರ ದಾಳಿಗಳನ್ನು ಪ್ರಾರಂಭಿಸಿತು. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯ ತಾಣಗಳನ್ನು ಗುರಿಯಾಗಿಸಿಕೊಂಡು ಈ ದಾಳಿಯಲ್ಲಿ ದಾಳಿ ನಡೆಸಲಾಗಿದೆ.,

