ಸಿಂಧನೂರು : ನೀಟ್ ಅಕ್ರಮದ ವಿರುದ್ಧ ಶಾಂತಿಯುತವಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬರ್ಬರವಾಗಿ ಲಾಠಿಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರನ್ನು ಮಂತ್ರಿ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟಸಿ ಮಾನ್ಯ ತಹಸೀಲ್ದಾರ್ ಸಿಂಧನೂರು ಅವರ ಮುಖಾಂತರ ಗೌರವಾನ್ವಿತ ರಾಷ್ಟ್ರೀಪತಿಗಳಿಗೆ ಮನವಿ ಸಲ್ಲಿಸಲಾಯಿತು.
ನಂತರ ಅವರು ಮಾತನಾಡಿ ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿ, ಯುವಜನರು ಜುಲೈ 20ರಂದು ದೆಹಲಿಯಲ್ಲಿ ಶಾಂತಿಯುತವಾಗಿ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್ ಚಲೋ ಹೋರಾಟವನ್ನು ದಿಕ್ಕು ತಪ್ಪಿಸಲು ಪ್ರಯತ್ನಿಸಿದ್ದಲ್ಲದೇ, ದುರುದ್ದೇಶದಿಂದ ಕೇಂದ್ರ ಗೃಹ ಇಲಾಖೆಯ ಅಣತಿಯಂತೆ ದೆಹಲಿ ಪೊಲೀಸರು ವಿದ್ಯಾರ್ಥಿ, ಯುವಜನರ ಮೇಲೆ ಲಾಠಿಚಾರ್ಜ್ ಮಾಡಿ ಅತ್ಯಂತ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಈ ಘಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ದುಷ್ಕೃತ್ಯವನ್ನು ಪ್ರಗತಿಪರ ಸಂಘಟನೆಗಳ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ ಎಂದು ವಿವಿಧ ಕಾಲೇಜಿನ ವಿದ್ಯಾರ್ಥಿಗಳ ಒಳಗೊಂಡಂತೆ ನಗರದ ಗಾಂಧಿ ಸರ್ಕಾರದಲ್ಲಿ ಮಾನವನ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಮಾನ್ಯ ತಹಸಿಲ್ದಾರ್ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮಾನವಿ ಸಲ್ಲಿಸಲಾಯಿತು,
ಈ ಸಂದರ್ಭದಲ್ಲಿ: ಚಂದ್ರಶೇಖರ ಗೊರೆಬಾಳ. ಡಿಹೆಚ್. ಕಂಬಳಿ. ಹುಸೇನ್ ಸಾಬ್. ಅಬ್ದುಲ್ ಸಮಾನ್ ಚೌದ್ರಿ. ಬಸವಂತರಾಯ ಗೌಡ. ಅಶೋಕ್ ನಂಜಲದಿನ್ನಿ. ಅಶೋಕಕುಮಾರ್ ಬೇರಗಿ. ಬಿ ಎನ್. ಯಾರದಿಹಾಳ. ಭಾಷಾ ಮಿಯಾ.ಬಸವರಾಜ ಬಾದರ್ಲಿ.ರಮೇಶ್ ಬಸಾಪುರ. ಶಂಕರ್ ಗುರಿಕಾರ್. ಪರಶುರಾಮ್ ಭಂಡಾರಿ. ಡಾ. ವಾಸಿಮ್ ಅಹ್ಮದ್. ವಿರುಪಮ್ಮ. ಆಂಬುಲೈಸ ನಾಯ್ಕ್ ಸೇರಿದಂತೆ ಇನ್ನೂ ಅನೇಕರು ಇದ್ದರು.
ವರದಿ : ಬಸವರಾಜ ಬುಕ್ಕನಹಟ್ಟಿ,


