LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಮ್ಮ ಕರ್ನಾಟಕ ಸೇನೆಗೆ ನೂತನ ತಾಲೂಕ ಅಧ್ಯಕ್ಷ ಅಂಬಿರಾಜ್ ನೇಮಕ

Advertisement
ಸಿಂಧನೂರು: ಜುಲೈ ೧೮ ರಂದು ನಮ್ಮ ಕರ್ನಾಟಕ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಅವರ ನೇತೃತ್ವದಲ್ಲಿ ರಾಯಚೂರಿನ ನಮ್ಮ ಕರ್ನಾಟಕ ಸೇನೆ ಜಿಲ್ಲಾ ಕಛೇರಿಯಲ್ಲಿ ಸಭೆ ಸೇರಿ ಸಿಂಧನೂರು ಅಂಬಿರಾಜ್ ಮ್ಯಾಕಲ್ ಅವರನ್ನು ಸೇನೆಗೆ ನೂತನ ತಾಲೂಕ ಅಧ್ಯಕ್ಷರನ್ನಾಗಿ ಮಾಡಿ ಆದೇಶ ಪ್ರತಿ ನೀಡಲಾಯಿತು ಎಂದು ಜಿಲ್ಲಾ ಘಟಕ ಅಧ್ಯಕ್ಷ ಕೊಂಡಪ್ಪ ಕೆ. ತಿಳಿಸಿದರು.

ನಂತರ ನಮ್ಮ ಕರ್ನಾಟಕ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಯವರು ಮಾತನಾಡಿ ಜಿಲ್ಲಾ ಮತ್ತು ಮತ್ತು ತಾಲೂಕ ಮಟ್ಟದಲ್ಲಿ ನಮ್ಮ ಕರ್ನಾಟಕ ಸೇನೆ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಜೊತೆಗೆ ಸಾಮಾಜಿಕ ಕಳವಳಿಯೊಂದಿಗೆ ನೆಲ ಜಲ ನಾಡು-ನುಡಿಗಾಗಿ ಅಲ್ಲದೆ ಸಾಮಾಜಿಕ ಸೇವೆಯೊಂದಿಗೆ ಸಂಘದ ಶ್ರೇಯಾಭಿವೃದ್ಧಿಯಲ್ಲಿ ಮುನ್ನಡೆಯಬೇಕು ಮತ್ತು ರಾಜ್ಯದ ಗ್ರಾಮೀಣ ಭಾಗದಲ್ಲಿ ಆಕ್ರಮ ಶಾಲೆಗಳು ಹಾಗೂ ಆಕ್ರಮ ಮಧ್ಯ ಮಾರಾಟ ಹೆಚ್ಚಾಗಿದ್ದು ಅವುಗಳನ್ನು ತಡೆಗಟ್ಟವಲ್ಲಿ ಪರಿಣಾಮಕಾರಿಯಾಗಿ ಹೋರಾಟಗಳನ್ನು ಮಾಡಬೇಕಾಗಿದೆ ಎಂದರು.

ನೂತನ ತಾಲೂಕು ಘಟಕ ಅಧ್ಯಕ್ಷ ಅಂಬಿ ರಾಜ್ ಮ್ಯಾಕಲ್ ಮಾತನಾಡಿ ಪಡಕೋಟೆ ಸರ್ ಅವರು ನನ್ನ ಸಾಮಾಜಿಕ ಸೇವೆಯನ್ನು ಗುರುತಿಸಿ ನಮ್ಮ ಕರ್ನಾಟಕ ಸೇನೆಗೆ ಸಿಂಧನೂರು ತಾಲೂಕ ಅಧ್ಯಕ್ಷನಾಗಿ ಮಾಡಿ ಆದೇಶ ಪ್ರತಿ ನೀಡಿದ್ದಾರೆ ಸಂಘಟನೆಗೆ ಕೆಟ್ಟ ಹೆಸರು ತರದೆ ಕನ್ನಡ ನೆಲ ಜಲ ಭಾಷೆ ಸಂಸ್ಕೃತಿ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತೇನೆ ಕನ್ನಡ ನಾಡು ನುಡಿಗಾಗಿ ಹಗಲಿರಳು ಶ್ರಮಿಸುತ್ತೇನೆ ಹಾಗೂ ಜಿಲ್ಲಾ ಘಟಕ ಅಧ್ಯಕ್ಷ ಕೊಂಡಪ್ಪ ಕೆ. ಸರ್ ಅವರ ನೇತೃತ್ವದಲ್ಲಿ ನಗರ ಘಟಕ ಹೋಬಳಿ ಘಟಕ ಗ್ರಾಮ ಘಟಕ ಪದಾಧಿಕಾರಿಗಳ ನೇಮಕ ಮಾಡುವಲ್ಲಿ ಶ್ರಮಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಸಂಚಾಲಕ ಹುಸೇನ್ ಬಾಷಾ, ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ, ಜಾಫರ್, ಗನಿಪಾಷ, ಮುನ್ನ, ಸಿದ್ದಣ್ಣ, ಶಾಬಾಜ್, ಮೌನೇಶ್, ಇನ್ನು ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು

ವರದಿ:ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ