Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

4.1 ಕೋಟಿ ಮಕ್ಕಳಲ್ಲಿ ಬೋಜು : ಜಗತ್ತಿನಲ್ಲೇ ಭಾರತಕ್ಕೆ 2ನೇ ಸ್ಥಾನ

Advertisement

ನವದೆಹಲಿ: ಭಾರತದ ಮಕ್ಕಳಲ್ಲಿ ಬೊಜ್ಜು ಹಾಗೂ ಅತಿಯಾದ ತೂಕದ ಸಮಸ್ಯೆ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ದೇಶವು ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು 'ವರ್ಲ್ಡ್ ಒಬೆಸಿಟಿ ಅಟ್ಲಾಸ್' ವರದಿ ಹೇಳಿದೆ.

ಪ್ರಸ್ತುತ ದೇಶದಲ್ಲಿ 5-19 ವರ್ಷದೊಳಗಿನ ಸುಮಾರು 4.1 ಕೋಟಿ ಮಕ್ಕಳು ಅತಿಕಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಈ ಪೈಕಿ 1.4 ಕೋಟಿ ಮಕ್ಕಳು ತೀವ್ರ ಬೊಜ್ಜಿನ ವ್ಯಾಪ್ತಿಗೆ ಬರುತ್ತಾರೆ ಎಂದು ವರದಿ ಹೇಳಿದೆ.

ಈ ಪಟ್ಟಿಯಲ್ಲಿ 6.2 ಕೋಟಿ ಮಕ್ಕಳೊಂದಿಗೆ ಚೀನಾ ಮೊದಲ ಸ್ಥಾನದಲ್ಲಿದ್ದರೆ, 2.7 ಕೋಟಿ ಮಕ್ಕಳೊಂದಿಗೆ ಅಮೆರಿಕ ಮೂರನೇ ಸ್ಥಾನದಲ್ಲಿದೆ.

ತಕ್ಷಣವೇ ಸೂಕ್ತ ಆರೋಗ್ಯ ನೀತಿ ಹಾಗೂ ಜಾಗೃತಿ ಕ್ರಮಗಳನ್ನು ಕೈಗೊಳ್ಳದಿದ್ದರೆ, 2040ರ ವೇಳೆಗೆ ಭಾರತದಲ್ಲಿ ಅತಿಯಾದ ತೂಕ ಹೊಂದಿರುವ ಮಕ್ಕಳ ಸಂಖ್ಯೆ 5.6 ಕೋಟಿಗೆ ತಲುಪುವ ಅಪಾಯವಿದೆ ಎಂದು ವರದಿ ಎಚ್ಚರಿಸಿದೆ. 

ಹದಿಹರೆಯದ ಶೇ.74ರಷ್ಟು ಮಕ್ಕಳಲ್ಲಿ ದೈಹಿಕ ಚಟುವಟಿಕೆಗಳ ಕೊರತೆ, ಅತಿಯಾದ ಸಂಸ್ಕರಿಸಿದ ಆಹಾರ ಮತ್ತು ಸಕ್ಕರೆ ಭರಿತ ಪಾನೀಯಗಳ ಬಳಕೆ ಹಾಗೂ ಬಾಲ್ಯದಲ್ಲಿ ಸಮರ್ಪಕ ಪೋಷಕಾಂಶಗಳ ಅಭಾವವೇ ಈ ಸಮಸ್ಯೆಗೆ ಮುಖ್ಯ ಕಾರಣ ಎಂದು ಹೇಳಲಾಗಿದೆ.

ಜತೆಗೆ ಇತ್ತೀಚಿನ ದಿನಗಳಲ್ಲಿ ಮಕ್ಕಳು ರೂಢಿಸಿಕೊಳ್ಳುತ್ತಿರುವ ದಿನಚರಿ ಹಾಗೂ ಅದನ್ನು ಬದಲಿಸಿಕೊಳ್ಳುವಂತೆ ಅವರಿಗೆ ಯಾರಿಂದಲೂ ಮಾರ್ಗದರ್ಶನ ಸಿಗದಿರುವುದು ಕೂಡ ಅತಿ ತೂಕದ ಸಮಸ್ಯೆ ಜಾಗತಿಕವಾಗಿ ಹೆಚ್ಚಾಗಲು ಕಾರಣ ಎನ್ನಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
4.1 ಕೋಟಿ ಮಕ್ಕಳಲ್ಲಿ ಬೋಜು : ಜಗತ್ತಿನಲ್ಲೇ ಭಾರತಕ್ಕೆ 2ನೇ ಸ್ಥಾನಪ್ರಶ್ನೆ ಪತ್ರಿಕೆ ಸೋರಿಕೆಗೆ ಕಠಿಣ ಕಾನೂನುಗಳು ಜಾರಿಗೆ : ತಡರಾತ್ರಿ ಮೋದಿ ಘೋಷಣೆ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ