
ಈ ಸುದ್ದಿಯನ್ನು ಕೇಳಿ ಪೊಲೀಸ್ ಇಲಾಖೆಯ ಬಸವನ ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ದಿಢೀರನೆ ಆ ಸ್ಥಳಕ್ಕೆ ಬಂದರು. ಸಾಮಗ್ರಿಗಳು ತೇಲಿ ಹೋಗಿವೆ. ಮನೆಗಳು ವಾಸ ಮಾಡಲು ಅಸ್ತವ್ಯಸ್ಥವಾಗಿವೆ. ಕೂಡಲೇ ಅಧಿಕಾರಿಗಳು ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.
ಧರಣಿ ಸ್ಥಳಕ್ಕೆ ತಹಸೀಲ್ದಾರ್ ವೈ, ಎಸ್.ಸೋಮನಕಟ್ಟಿ, ಜಿಲ್ಲಾ ಯೋಜನಾ ನಿರ್ದೇಶಕ ತಾಲೂಕಿನ ವಿಪತ್ತು ನಿರ್ವಾಹಣಾ ನೋಡಲ್ ಅಧಿಕಾರಿ ಬಿ.ಎ.ಸೌದಾಗರ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ ಭೇಟಿ ನೀಡಿದ ಮನವೊಲಿಕೆ ಮಾಡಿದರು. ಆನಂತರ ಮನವಿ ಸಲ್ಲಿಸಿ ಪ್ರತಿಭಟನೆ ಹಿಂಪಡೆದರು.
ಈ ಸಂದರ್ಭದಲ್ಲಿ ನೀಲು ನಾಯಕ, ಪರಶುರಾಮ ಆಡಗಿಮನಿ, ಹನುಮಂತ ಕಾಮನಕೇರಿ ರಾಜು ಮುಳವಾಡ, ರಮೇಶ ಇಂಗಳೇಶ್ವರ, ಸಿದ್ದಪ್ಪ ಪೈಠಾಣ, , ಲಕ್ಷ್ಮಣ ಅಂಬಿಗೇರ, ಶ್ರೀಶೈಲ ಕುಂಬಾರ, ಬಸವರಾಜ ಜಾಡರ, , ಅನಿತಾ ಅಂಬಿಗೇರ, ಅನೇಕ ಜನ ಪಾಲ್ಗೊಂಡಿದ್ದರು.

