Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ, ಪರಿಹಾರಕ್ಕೆ ಆಗ್ರಹಿಸಿ ರಸ್ತೆ ತಡೆದು ಆಕ್ರೋಶ

Advertisement
ವಿಜಯಪುರ:  ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಜೆ ಸುರಿದ ಭಾರಿ ಮಳೆಗೆ ಲಕ್ಷ್ಮೀನಗರದ ಪಕ್ಕದ ಜಮೀನಿನ ಒಡ್ಡು ಒಡೆದು ಮನೆಯೊಳಗೆ ನೀರು ನುಗ್ಗಿ ಜನರು ರಾತ್ರಿಯಿಡಿ ಪರದಾಡುವಂತಾಗಿತ್ತು. ಹೀಗಾಗಿ, ತಮಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ನಿವಾಸಿಗಳು ಅಂಬೇಡ್ಕರ ವೃತ್ತದಲ್ಲಿ ದಿಢೀ‌ರ್ ರಸ್ತೆ ತಡೆದು ಧರಣಿ ನಡೆಸಿದರು. ಪ್ರತಿಭಟನೆ ನಿರತರರು ವಿವಿಧ ಮನೆಯಲ್ಲಿನ ಸಾಮಗ್ರಿ ಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿ, ಆಕ್ರೋಶ ವ್ಯಕ್ತಪಡಿಸಿದರು.



ಈ ಸುದ್ದಿಯನ್ನು ಕೇಳಿ ಪೊಲೀಸ್ ಇಲಾಖೆಯ ಬಸವನ ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ದಿಢೀರನೆ ಆ ಸ್ಥಳಕ್ಕೆ ಬಂದರು. ಸಾಮಗ್ರಿಗಳು ತೇಲಿ ಹೋಗಿವೆ. ಮನೆಗಳು ವಾಸ ಮಾಡಲು ಅಸ್ತವ್ಯಸ್ಥವಾಗಿವೆ. ಕೂಡಲೇ ಅಧಿಕಾರಿಗಳು ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.

ಧರಣಿ ಸ್ಥಳಕ್ಕೆ ತಹಸೀಲ್ದಾರ್ ವೈ, ಎಸ್.ಸೋಮನಕಟ್ಟಿ, ಜಿಲ್ಲಾ ಯೋಜನಾ ನಿರ್ದೇಶಕ ತಾಲೂಕಿನ ವಿಪತ್ತು ನಿರ್ವಾಹಣಾ ನೋಡಲ್ ಅಧಿಕಾರಿ ಬಿ.ಎ.ಸೌದಾಗರ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ ಭೇಟಿ ನೀಡಿದ ಮನವೊಲಿಕೆ ಮಾಡಿದರು. ಆನಂತರ ಮನವಿ ಸಲ್ಲಿಸಿ ಪ್ರತಿಭಟನೆ ಹಿಂಪಡೆದರು.

ಈ ಸಂದರ್ಭದಲ್ಲಿ ನೀಲು ನಾಯಕ, ಪರಶುರಾಮ ಆಡಗಿಮನಿ, ಹನುಮಂತ ಕಾಮನಕೇರಿ ರಾಜು ಮುಳವಾಡ, ರಮೇಶ ಇಂಗಳೇಶ್ವರ, ಸಿದ್ದಪ್ಪ ಪೈಠಾಣ, , ಲಕ್ಷ್ಮಣ ಅಂಬಿಗೇರ, ಶ್ರೀಶೈಲ ಕುಂಬಾರ, ಬಸವರಾಜ ಜಾಡರ, , ಅನಿತಾ ಅಂಬಿಗೇರ, ಅನೇಕ ಜನ ಪಾಲ್ಗೊಂಡಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ