Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್ ನ ಜಾಫರ್ ಎಕ್ಸ್ ಪ್ರೆಸ್ ರೈಲು ಹೈಜಾಕ್ : 30 ಜನ ಪಾಕ್  ಸೈನಿಕರ ಹತ್ಯೆ

Advertisement
ಕರಾಚಿ : ಪಾಕಿಸ್ತಾನದಲ್ಲಿ ಜಾಫರ್ ಎಕ್ಸ್ ಪ್ರೆಸ್ ರೈಲನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಹೈಜಾಕ್ ಮಾಡಿದ್ದು, ಈವರೆಗೆ ಗುಂಡಿನ ಕಾಳಗದಲ್ಲಿ 30 ಕ್ಕೂ ಹೆಚ್ಚು ಪಾಕ್ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಕ್ವೆಟ್ಟಾದಿಂದ ಬಲೂಚಿಸ್ತಾನದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ರೈಲು ಹೈಜಾಕ್ ಮಾಡಲಾಗಿದ್ದು, ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪಾಕಿಸ್ತಾನ ಸರ್ಕಾರವನ್ನು ಬಲೂಚ್ ರಾಜಕೀಯ ಕೈದಿಗಳು, ಮತ್ತು ಕಾರ್ಯಕರ್ತರನ್ನು 48 ಗಂಟೆಗಳ ಒಳಗೆ ಯಾವುದೇ ಷರತ್ತುಗಳಿಲ್ಲದೆ ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.


ರೈಲು ಅಪಹರಣದಲ್ಲಿ 214 ಪಾಕಿಸ್ತಾನಿಗಳ ಪೈಕಿ 100 ಮಂದಿಯನ್ನು ಬಿಡುಗಡೆ ಮಾಡಿದ್ದು, ಉಳಿದವರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾಗಿ ಬಿಎಲ್‌ಎ ಹೇಳಿಕೊಂಡಿದೆ. ಅವರ ಬೇಡಿಕೆಗಳನ್ನು ಈಡೇರಿಸದಿದ್ದರೆ ಗಂಭೀರ ಪರಿಣಾಮಗಳು ಉಂಟಾಗಬಹುದು ಎಂದು ಸಂಘಟನೆ ಸ್ಪಷ್ಟಪಡಿಸಿದೆ.


ಬಲೂಚಿಸ್ತಾನದಲ್ಲಿ ರೈಲು ದಾಳಿಯ ನಂತರ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಬಿಎಲ್‌ಎ ನಾಗರಿಕರನ್ನು ಬಿಡುಗಡೆ ಮಾಡಿತು ಆದರೆ ಮಿಲಿಟರಿ ಸಿಬ್ಬಂದಿಯನ್ನು ಒತ್ತೆಯಾಳಾಗಿ ತೆಗೆದುಕೊಂಡಿತು.


ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿ ರಾಣಾ ದಿಲಾವರ್, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 350 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಮತ್ತು ಪರಿಹಾರ ರೈಲು ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿದೆ ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ