Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ : ಭಾರೀ ವೈರಲ್

Advertisement
ಬೆಂಗಳೂರು ಹೊರವಲಯ ರಾಮನಗರದ ಬಿಡದಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಕಾರ್ಖಾನೆಯೊಂದರ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹವೊಂದು ಪತ್ತೆಯಾಗಿದ್ದು, ಭಾರೀ ವೈರಲ್ ಆಗಿದೆ.

ಬಿಡದಿಯ ಕಾರ್‌ನ ಸೀಟ್‌ಗಳನ್ನ ತಯಾರು ಮಾಡುವ ಕಾರ್ಖಾನೆಯ ಶೌಚಾಲಯದ ಗೋಡೆಯಲ್ಲಿ ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆದಿದ್ದು, ಜೊತೆಗೆ ಕನ್ನಡಿಗರ ಬಗ್ಗೆ ಕೂಡ ಅವ್ಯಾಚ್ಯ ಪದಗಳಿಂದ ಬರೆಯಲಾಗಿದೆ.ಸದ್ಯ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರೇ ಈ ಕೆಲಸ ಮಾಡಿರುವುದಾಗಿ ಅನುಮಾನ ವ್ಯಕ್ತವಾಗಿದೆ.

ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಕಾರ್ಖಾನೆಯ ಆಡಳಿತ ಮಂಡಳಿ ಕೂಡ ಈ ಬಗ್ಗೆ ನೋಟಿಸ್ ಬೋರ್ಡ್ ನಲ್ಲಿ ಎಚ್ಚರಿಕೆ ನೀಡಿದ್ದು, ಈ ರೀತಿಯ ಬರವಣಿಗೆ ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿ ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ.

ಇದು ಮುಂದುವರೆದು ದೇಶದ ಕಾನೂನಿನ ಚೌಕಟ್ಟಿನಲ್ಲಿ ದೇಶದ್ರೋಹಿ ಅಪರಾಧವಾಗುತ್ತದೆ. ಅಂತಹ ಕಾರ್ಮಿಕರನ್ನ ಪೊಲೀಸರಿಗೆ ಒಪ್ಪಿಸಿ, ಜೈಲು ವಾಸವಾಗುವಂತೆ ಕ್ರಮವಹಿಸುತ್ತೇವೆ ಎಂದು ಹೇಳಿ ಸುಮ್ಮನಾಗಿದೆ.

ಸದ್ಯ ಈ ಪೋಸ್ಟರ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬಿಡದಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಎಫ್‌ಐಆರ್ ದಾಖಲಾಗಿದೆ. ಅನಾಮಧೇಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಈ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ವ್ಯಕ್ತಿಯ ಈ ಬರಹದಿಂದ ಕನ್ನಡಕ್ಕೂ ಅವಮಾನವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು, ಕೂಡಲೇ ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ