Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರರ ಸಂಘದ ಚುನಾವಣೆ: ಒಂದು ಮತದಿಂದ ಜಯಗಳಿಸಿದ ಪಾಪಣ್ಣ

Advertisement
ತುರುವೇಕೆರೆ: ರಾಜ್ಯ ಸರ್ಕಾರಿ ನೌಕರರ ಸಂಘದ ತುರುವೇಕೆರೆ ತಾಲೂಕು ಘಟಕದ ನಿರ್ದೇಶಕ ಸ್ಥಾನಕ್ಕೆ ಪದವಿ ಪೂರ್ವ ಹಾಗೂ ಪದವಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉಪನ್ಯಾಸಕ ಪಾಪಣ್ಣ ಕೇವಲ ಒಂದು ಮತದಿಂದ ಜಯಗಳಿಸಿ ಗೆಲುವಿನ ನಗೆ ಬೀರಿದ್ದಾರೆ.

ಪಟ್ಟಣದ ಸರ್ಕಾರಿ ಮಾದರಿ ಬಾಲಕರ ಪಾಠಶಾಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತುರುವೇಕೆರೆ ತಾಲೂಕು ಘಟಕಕ್ಕೆ ನೂತನ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಪದವಿ ಪೂರ್ವ ಹಾಗೂ ಪದವಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉಪನ್ಯಾಸಕ ಪಾಪಣ್ಣ ಕೇವಲ ಒಂದು ಮತದ ಅಂತರದಲ್ಲಿ ಜಯಗಳಿಸಿ ಇದೇ ಮೊದಲ ಬಾರಿಗೆ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿ ಕಂಡುಬಂದ ಈ ಕ್ಷೇತ್ರದಲ್ಲಿ ಪಾಪಣ್ಣ ತಮ್ಮ ಪ್ರತಿಸ್ಪರ್ಧಿ ನಿಜಗುಣಸ್ವಾಮಿ ಅವರಿಗಿಂತ ಒಂದು ಮತ ಅಧಿಕ ಪಡೆದು ಜಯಗಳಿಸಿದರು.

ಪದವಿ ಪೂರ್ವ ಹಾಗೂ ಪದವಿ ಕ್ಷೇತ್ರದಲ್ಲಿ 46 ಮಂದಿ ಮತದಾರರಿದ್ದರು. ಈ ಪೈಕಿ 41 ಮತಗಳು ಚಲಾವಣೆಯಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಪಾಪಣ್ಣ 19 ಮತಗಳನ್ನು ಪಡೆದು ವಿಜೇತರಾದರೆ, ಪ್ರತಿಸ್ಪರ್ಧಿ ಉಪನ್ಯಾಸಕ ನಿಜಗುಣಸ್ವಾಮಿ 18 ಹಾಗೂ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ನಂಜೇಗೌಡ ಕೇವಲ 04 ಮತ ಪಡೆದು ಪರಾಜಿತಗೊಂಡರು. ಚುನಾವಣೆಯಲ್ಲಿ ಜಯಗಳಿಸಿದ ಪಾಪಣ್ಣ ಅವರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ರಾಘವೇಂದ್ರ, ಶಿಕ್ಷಕರಾದ ರಾಜು, ನಾಗರಾಜ್, ವಿವಿಧ ಸರ್ಕಾರಿ ಪ್ರೌಢಶಾಲೆಗಳ ಬೋದಕೇತರರಾದ ಕೆಂಪೇಗೌಡ, ಪೂರ್ಣಚಂದ್ರ, ಶಿವರಾಜ್ ಕುಮಾರ್, ಜಯಣ್ಣ ಸೇರಿದಂತೆ ಸ್ನೇಹಿತರು, ಹಿತೈಷಿಗಳು ಅಭಿನಂದಿಸಿದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ