Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಗೆಲ್ಲಿ 31 ಸಾವಿರ

Advertisement
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ.

ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ., ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ. ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ

ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗ್ಗೆ

ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ

1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

06-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ 10-09-2024 ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅಕ್ಟೋಬರ್ 2 ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ನಿಬಂಧನೆಗಳು

- ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. - ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. - ಆಕರವಾಗಿ ಬಳಸಿದ ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. - ಪ್ರಬಂಧ ಬರೆಯುವ ಸ್ಥಳದಲ್ಲಿ ಪರಾಮರ್ಶನ/ಆಧಾರ ಗ್ರಂಥಗಳು/ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ. - ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. - ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. - ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

ಬಹುಮಾನ ವಿವರ

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಬಹುಮಾನವಾಗಿ ರೂ.31,000 ಸಿಗಲಿದೆ. ದ್ವಿತೀಯ ಬಹುಮಾನವಾಗಿ ರೂ.21,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ರೂ.11,000 ನೀಡಲಾಗುತ್ತದೆ.

ಇನ್ನೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದಂತ ಪ್ರಬಂಧಕ್ಕೆ ರೂ.3,000, ದ್ವಿತೀಯ ಬಹುಮಾನಕ್ಕೆ ರೂ.2,000 ಹಾಗೂ ತೃತೀಯ ಬಹುಮಾನವಾಗಿ ರೂ.1000 ನೀಡಲಾಗುತ್ತದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ