Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ

Advertisement

ಕಾಳಗಿ : ತಾಲೂಕಿನ ರಟಕಲ್ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಗ್ರಾಮಸ್ಥರು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ದಿನಗಳಿಂದ ಸಮರ್ಪಕ ನೀರು ಸರಬರಾಜು ಆಗದೆ ಜನರು ಹಾಗೂ ಜಾನುವಾರುಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಗ್ರಾಮದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ನೀರು ರಸ್ತೆ ಮೇಲೆ ಸೋರಿಕೆಯಾಗುತ್ತಿದ್ದು, ಮಹಿಳೆಯರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಶಿಷ್ಟ ಜಾತಿ ಬಡಾವಣೆಯಲ್ಲಿನ ನೀರಿನ ಮೋಟಾರ್ ಮತ್ತು ಕರೆಂಟ್ ಮೀಟರ್ ಸುಟ್ಟು ಹೋಗಿದ್ದರೂ ಒಂದು ವಾರದಿಂದ ದುರಸ್ತಿ ಮಾಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ತಕ್ಷಣ ಬಗೆಹರಿಸಬೇಕು ಎಂದು ರಸ್ತೆ ತಡೆ ಚಳವಳಿ ನಡೆಸಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಕಾಳಗಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ತಿಳಿಸಿದ್ದಾರೆ.

news_1778674148_1_994.webp

 

news_1778674148_2_814.webp

 

ವರದಿ : ಹಣಮಂತ ಕುಡಹಳ್ಳಿ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹರಾಯಚೂರಿನಲ್ಲಿ ನಕಲಿ ನೋಟು ಜಾಲ ಬಯಲು :ಪೆಟ್ರೋಲ್ ಬಂಕ್ ಸಿಬ್ಬಂದಿಯ ಜಾಗೃತಿಯಿಂದ ಇಬ್ಬರು ಆರೋಪಿಗಳ ಬಂಧನವಿಶ್ವಾಸ ಮತಯಾಚನೆಯಲ್ಲಿ ವಿಜಯ್ ಯಶಸ್ವಿ : 144 ಶಾಸಕರ ಬೆಂಬಲ ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಕಳ್ಳರ ಕೈಚಳಕ : 3 ಕೆಜಿ ಬೆಳ್ಳಿ ಮತ್ತು ಚಿನ್ನಾಭರಣ ಕದ್ದು ಪರಾರಿ ಬೈಕ್‌ನಿಂದ ಬಿದ್ದು ಮಹಿಳೆ ಸಾವು