Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಪ್ರದಾಯಿಕ ಶೈಲಿ ಅಡುಗೆ-ತೊಡುಗೆ ಆಚರಣೆಗಳ ಪ್ರದರ್ಶನ ಕಾರ್ಯಕ್ರಮ

Advertisement
ರಾಮದುರ್ಗ:ಆಧುನಿಕತೆಯ ಭರಾಟೆಯಲ್ಲಿ ವಿಸ್ಮೃತಿಗೆ ಒಳಗಾಗುತ್ತಿರುವ ನಮ್ಮ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯ ಒಂದು ಕಿರು ನೋಟ ಅವಲೋಕನ ಹಾಗೂ ಪ್ರದರ್ಶನ ಕಾರ್ಯಕ್ರಮವು ಜರುಗಿತು.ಯುವಜನರು ನಮ್ಮ ದೇಶಿಯ ಸಂಸ್ಕೃತಿಯ ಅರಿವು ಮೂಡಿಸಿಕೊಳ್ಳಬೇಕೆಂಬ ಉದ್ದೇಶದಿಂದ ತಾಲೂಕಿನ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಸುರೇಬಾನ-ಮನಿಹಾಳ ಮಹಾ ವಿದ್ಯಾಲಯದಲ್ಲಿ ನಡೆದ ನಮ್ಮೂರು-ನಮ್ಮೂಟ ಕಾರ್ಯಕ್ರಮವನ್ನು ಪತ್ರಕರ್ತರಾದ ಎಸ್ ಆರ್ ಗುರುಬಸಣ್ಣವರ ಉದ್ಘಾಟಿಸಿದರು.



ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಸಾಂಪ್ರದಾಯಿಕ ಅಡುಗೆ,ಆಹಾರ ಪದಾರ್ಥಗಳು ಬಿಳಿಜೋಳ ರೊಟ್ಟಿ, ಕೊಬ್ಬರಿ ಸಾರು, ಶೇಂಗಾ ಚಟ್ನಿ, ತುಪ್ಪದಲ್ಲಿ ಮಾಡಿದ ಸದಕಿನ ಉಪ್ಪಿಟ್ಟು, ಸಜ್ಜೆ ಕಡುಬು, ಜೋಳದ ಪಡ್ಡು, ಉಳ್ಳಾಗಡ್ಡಿ ಪಚಡಿ, ಒಣಕಾರದ ಜುನುಕದ ವಡೆ, ಹೂರಣ ಕಡುಬು, ಕೊಬ್ಬರಿ ಕರ್ಚಿಕಾಯಿ, ಉದರ ಸಜ್ಜಕ, ಸುರಳ ಹೋಳಿಗೆ ಸೇರಿದಂತೆ ಇನ್ನೂ ವಿವಿಧ ರೀತಿಯ ಅಡುಗೆ, ಆಹಾರ ಪದಾರ್ಥಗಳ ಪ್ರದರ್ಶನ ಹಾಗೂ ತೊಡುಗೆ ಆಚರಣೆಗಳ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.



ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ರಮೇಶ ಮೋಟೆ, ಉಪನ್ಯಾಸಕರಾದ ರಮೇಶ ಬಡಿಗೇರ,ಪ್ರವೀಣ ಕೋಟಿ,, ಎಸ್.ಬಿ.ಪಾಟೀಲ,ಈರಪ್ಪ, ಪ್ರಕಾಶ ವಡ್ಡರ,ಮಹಾಲಕ್ಷ್ಮೀ ಮುನ್ನವಳ್ಳಿಮಠ, ಪತ್ರಕರ್ತ ಕುಮಾರ ಮಾದರ ಸೇರಿದಂತೆ ಎಲ್ಲ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

 

ವರದಿ: ಕುಮಾರ ಎಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ