Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ 578 ನರ್ಸರಿ ಶಾಲೆಗಳ ಆರಂಭಕ್ಕೆ ಅನುಮತಿ 

Advertisement
ಬೆಂಗಳೂರು: ಇತ್ತೀಚೆಗಷ್ಟೇ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 1008 ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಿಸಲು ಅನುಮತಿ ನೀಡಿದ್ದ ಸರ್ಕಾರ ಮತ್ತೆ 578 ನರ್ಸರಿ ಶಾಲೆಗಳ ಆರಂಭಕ್ಕೆ ಅನುಮತಿ ನೀಡಿದೆ.ರಾಜ್ಯದ 578 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ನರ್ಸರಿ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.

2024 -25ನೇ ಶೈಕ್ಷಣಿಕ ಸಾಲಿನಿಂದಲೇ 578 ನರ್ಸರಿ ತರಗತಿ ಆರಂಭಿಸಬೇಕಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ನರ್ಸರಿ ತರಗತಿ ಆರಂಭದ ಬಗ್ಗೆ ಸ್ಥಳೀಯರಲ್ಲಿ ಅರಿವು ಮೂಡಿಸಬೇಕು. ಎಲ್ಕೆಜಿಗೆ ನಾಲ್ಕು ವರ್ಷದಿಂದ ಐದು ವರ್ಷ ವಯೋಮಿತಿಯ ಮಕ್ಕಳನ್ನು ದಾಖಲಿಸಿಕೊಳ್ಳಬೇಕು.

ನರ್ಸರಿ ಪ್ರಾರಂಭಿಸಲು ಕನಿಷ್ಠ 20 ಮಕ್ಕಳು ಗರಿಷ್ಠ 30 ಮಕ್ಕಳನ್ನು ದಾಖಲಿಸಿಕೊಳ್ಳಬಹುದು. ಇದಕ್ಕೆ ಅಗತ್ಯ ಕೊಠಡಿ ಗುರುತಿಸಿ ಸ್ಥಳೀಯ ಚಿತ್ರಕಲಾ ಶಿಕ್ಷಕರು, ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಕೊಠಡಿಯನ್ನು ಸಜ್ಜುಗೊಳಿಸಬೇಕು.

ಪ್ರತಿ ತರಗತಿಗೆ ಒಬ್ಬ ಅತಿಥಿ ಶಿಕ್ಷಕರು, ಆಯಾ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಕಿದ್ದು, ಅತಿಥಿ ಶಿಕ್ಷಕರಿಗೆ 10 ಸಾವಿರ ರೂ., ಆಯಾಗಳಿಗೆ 5 ಸಾವಿರ ರೂ. ಸಂಭಾವನೆ ನಿಗದಿಪಡಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3:30ರ ವರೆಗೆ ಶಾಲೆ ನಡೆಸಬೇಕು. ಮಕ್ಕಳಿಗೆ ಅಂಗನವಾಡಿಗಳಂತೆ ಹಾಲು, ಉಪಹಾರ, ಊಟ ನೀಡಬೇಕು ಎಂದು ತಿಳಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ