Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂದಿಗಳ ಮಾತಿಗೆಲ್ಲ ಪ್ರತಿಕ್ರಿಯೆ ನೀಡಲ್ಲ : ಪರೋಕ್ಷವಾಗಿ ಕಾಶಪ್ಪನವರ್ ತಿವಿದ ಯತ್ನಾಳ್ 

Advertisement
ಬೆಳಗಾವಿ : ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪರ ವೈಯಕ್ತಿಕವಾಗಿ ಸಮುದಾಯದ ಬೆಂಬಲ ಎಂದಿರುವ ಕೂಡಲಂಸಗಮ ಸ್ವಾಮೀಜಿಯವರನ್ನು ಬದಲಾವಣೆ ಮಾಡುತ್ತೇವೆ ಎಂಬ ಶಾಸಕ ಹಾಗೂ ಪಂಚಮ ಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಟಾಂಗ್ ನೀಡಿದರು.

ಯಾವ ಅಂವಾ ಸ್ವಾಮೀಜಿ ಅವರನ್ನು ತೆಗೆಯುವ ಮಾತನಾಡುತ್ತಿರೋದು? ಕಾಶಪ್ಪನವರ್ ಬಗ್ಗೆ ಮಾಧ್ಯಮದವರು ಕೇಳುತ್ತಿದ್ದಂತೆ ಗರಂ ಆದ ಯತ್ನಾಳ್, ವಿಜಯೇಂದ್ರ ಹೇಳಿ ಕಳ್ಸಿದ್ದಾನಾ? ಅಂತಹ ಹಂದಿಗಳ ಬಗ್ಗೆ ಯಾಕೆ ಕೇಳುತ್ತೀರಿ. ನಾನು ಹಂದಿಗಳ ಮಾತಿಗೆಲ್ಲ ಪ್ರತಿಕ್ರಿಯೆ ನೀಡಲ್ಲ. ಎಲ್ಲಾ ಸಮುದಾಯದ ಪರ ನಾನು ಕೆಲಸ ಮಾಡಿದ್ದೇನೆ. ಹಾಲುಮತ, ತಳವಾರ, ಅಂಬಿಗರ ಪರ ಮಾತಾಡಿದ್ದೇನೆ. ಹಂದಿಗಳ ಬಗ್ಗೆ ನಾನು ಮಾತಾಡಲ್ಲ ಎಂದು ತಿವಿದರು.

ಕಾಶಪ್ಪನವರ್ ಅವರನ್ನು ಪರೋಕ್ಷವಾಗಿ ಹಂದಿಗೆ ಹೋಲಿಸಿದ ಯತ್ನಾಳ್ ಅವರು, ಕೂಡಲಸಂಗಮ ಸ್ವಾಮೀಜಿ ಅವರನ್ನ ಯಾರು ಯಾರು ದಿಲ್ಲಿಗೆ ಕರೆದುಕೊಂಡು ಹೋಗಿದ್ದಾರೆ. ಮಂತ್ರಿ ಮಾಡಿ ಅಂತಾ ಕರೆದುಕೊಂಡು ಹೋಗಿದ್ದಾರೆ. ಅವರ ಲಾಭವನ್ನು ಪಡೆದಿದ್ದಾರೆ ಅಂತಾ ಗೊತ್ತಿದೆ.

ನಾನು ನನ್ನ ರಾಜಕೀಯ ಜೀವನದಲ್ಲಿ ಒಮ್ಮೆಯೂ ಮಂತ್ರಿ ಮಾಡಿ ಅಂತಾ ಕರೆದುಕೊಂಡು ಸ್ವಾಮೀಜಿಗಳನ್ನ ಬಳಸಿಕೊಂಡಿಲ್ಲ ಎಂದರು. ನಮ್ಮದು ಕೂಡಲಸಂಗಮ ಸ್ವಾಮೀಜಿಯವರದ್ದು ಮೀಸಲಾತಿ ಹೋರಾಟಕ್ಕೆ ಮಾತ್ರ ಸಂಬಂಧ. ಲಕ್ಷ್ಮಿ ಹೆಬ್ಬಾಳ್ಕರ್, ಕುಲಕರ್ಣಿ ಕೂಡ ಸ್ವಾಮೀಜಿ ಅವರನ್ನು ಉಪಯೋಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್