Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿಗೆ ಇಂಡೋನೇಷ್ಯಾ ಅದಿಪೂರ್ಣ' ಪದಕ ಪ್ರದಾನ 

Advertisement

ಜಕಾರ್ತಾ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ 'ಬಿಂಟಾಂಗ್ ರಿಪಬ್ಲಿಕ್ ಇಂಡೋನೇಷ್ಯಾ ಅದಿಪೂರ್ಣ' ಪದಕವನ್ನು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೋ ಸುಬಿಯಾಂಟೋ ಮಂಗಳವಾರ ಪ್ರದಾನ ಮಾಡಿದರು.

ಜಕಾರ್ತಾದ ಅಧ್ಯಕ್ಷೀಯ ಭವನದಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ಈ ಗೌರವ ಪ್ರದಾನವಾಗಿದ್ದು, ಪ್ರಧಾನಿ ಮೋದಿ ಅವರ ಮೂರು ರಾಷ್ಟ್ರಗಳ ಪ್ರವಾಸದ ಪ್ರಮುಖ ಘಟ್ಟಗಳಲ್ಲಿ ಇದೂ ಒಂದಾಗಿದೆ.

ಅಧ್ಯಕ್ಷ ಪ್ರಬೋವೋ ಸುಬಿಯಾಂಟೋ ಮಾತನಾಡಿ, ಭಾರತ ಮತ್ತು ಇಂಡೋನೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹಾಗೂ ಸಹಕಾರವನ್ನು ಮತ್ತಷ್ಟು ಬಲಪಡಿಸುವಲ್ಲಿ ಪ್ರಧಾನಿ ಮೋದಿ ನೀಡಿದ ವಿಶಿಷ್ಟ ಕೊಡುಗೆಯನ್ನು ಗೌರವಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಹೇಳಿದರು.

ಗೌರವ ಸ್ವೀಕರಿಸಿದ ಪ್ರಧಾನಿ ಮೋದಿ, "ಈ ಪ್ರಶಸ್ತಿ ನನ್ನೊಬ್ಬರದ್ದಲ್ಲ, ಭಾರತದ 140 ಕೋಟಿ ಜನರದ್ದು. ಇದು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಸ್ನೇಹಪೂರ್ಣ ಸಂಬಂಧಗಳ ಪ್ರತೀಕವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷ ಪ್ರಬೋವೋ, ಇಂಡೋನೇಷ್ಯಾ ಸರ್ಕಾರ ಹಾಗೂ ಅಲ್ಲಿನ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು" ಎಂದು ಹೇಳಿದರು.

ಪ್ರಧಾನಿ ಮೋದಿ ಅವರು, ಕಳೆದ ಕೆಲವು ವರ್ಷಗಳಲ್ಲಿ ಭಾರತ-ಇಂಡೋನೇಷ್ಯಾ ಸಂಬಂಧಗಳು ಹೊಸ ಚೈತನ್ಯ, ವಿಶ್ವಾಸ ಮತ್ತು ಆಳವನ್ನು ಪಡೆದಿವೆ ಎಂದು ತಿಳಿಸಿದರು.

"2018ರಲ್ಲಿ ಸ್ಥಾಪಿತವಾದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ (Comprehensive Strategic Partnership) ಈಗ ಹೊಸ ಎತ್ತರ ತಲುಪಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಎರಡೂ ದೇಶಗಳು ಮಹತ್ವದ ಹೆಜ್ಜೆಗಳನ್ನು ಇಡುತ್ತಿವೆ" ಎಂದು ಹೇಳಿದರು.

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಭಾರತ-ಇಂಗ್ಲೆAಡ್ ಮೂರನೇ ಟ್ವೆಂಟಿ-೨೦ ಪಂದ್ಯ2008ರ ಅಹಮದಾಬಾದ್ ಸರಣಿ ಸ್ಪೋಟ ಕೇಸ್ : 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಧಾನಿ ಮೋದಿಗೆ ಇಂಡೋನೇಷ್ಯಾ ಅದಿಪೂರ್ಣ' ಪದಕ ಪ್ರದಾನ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಉಡುಗೊರೆ ವಿತರಿಸಿದ ಸಮಾಜ ಸೇವಕರಾದ ಡಾ. ಕಾಳೇಗೌಡ್ರುಬಳಗಾನೂರು ಪೊಲೀಸ್  ಕಾರ್ಯಾಚರಣೆ! ಡ್ರಗ್ ಪೆಡ್ಲರ್ ಬಂಧನ!ಸಂಕಷ್ಟದಲ್ಲಿರುವವರಿಗೆ ನೆರವಾಗುವುದೇ ನನ್ನ ಗುರಿ  : ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸುನಿಲ್ ಬಾಬು ಘೋಷಣೆಪ್ರಿಯಕರನಿಗೆ ಮೆಸೇಜ್ ಮಾಡಿ ವಿದ್ಯಾರ್ಥಿ ಆತ್ಮಹತ್ಯೆಗುರಾಯಿಸಿದಕ್ಕೆ ಅಪರಿಚಿತರಿಂದ ಯುವಕನ ಬರ್ಬರ ಕೊಲೆ ರಾಜ್ಯದ 17 ಜಿಲ್ಲೆ 129 ತಾಲ್ಲೂಕುಗಳು ಮಳೆ ಕೊರತೆ : ವಿಪತ್ತು ನಿರ್ವಹಣಾ ಕೇಂದ್ರದ ವರದಿ ವಿದ್ಯಾರ್ಥಿಗಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸಲ್ಲ : ಹೈಕೋರ್ಟ್