LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನಾಳೆ ಉಡುಪಿಗೆ ಪ್ರಧಾನಿ ಮೋದಿ

Advertisement
ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶುಕ್ರವಾರ ನಡೆಯುವ ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮೋದಿಯವರ ಆಗಮನಕ್ಕಾಗಿಯೇ ಆದಿ ಉಡುಪಿ ಮೈದಾನದಲ್ಲಿ ಹೆಚ್ಚುವರಿ ಹೆಲಿಪ್ಯಾಡ್ ಗಳನ್ನು ನಿರ್ಮಾಣ ಮಾಡಲಾಗಿದೆ.ಬುಧವಾರ ದೆಹಲಿಯಿಂದ ಆಗಮಿಸಿದ ವಾಯುಸೇನೆ ಅಧಿಕಾರಿಗಳು ಗುಣಮಟ್ಟ ಪರೀಕ್ಷಿಸಿದ್ದಾರೆ.

ನಂತರ ವಾಯು ಸೇನೆಯ ಮೂರು ಹೆಲಿಕಾಪ್ಟರ್ ಗಳು ಬಂದು ಉಡುಪಿ ಆಕಾಶದಲ್ಲಿ ಅನೇಕ ಬಾರಿ ಸುತ್ತು ಹೊಡೆದು ಹೆಲಿಪ್ಯಾಡ್ ಇಳಿಯುವ ಮತ್ತು ಟೆಕ್ ಆಫ್ ಮಾಡುವ ರಿಹರ್ಸಲ್ ನಡೆಸಿವೆ. ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ಸಾಗುವ ಆದಿ ಉಡುಪಿಯಿಂದ ಕೃಷ್ಣ ಮಠದವರೆಗಿನ ರಸ್ತೆ ಮತ್ತು ರೋಡ್ ಶೋ ನಡೆಸುವ ರಸ್ತೆಯಲ್ಲಿ ಗುರುವಾರ ರಿಹರ್ಸಲ್ ನಡೆಯಲಿದೆ.

ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರಿಗೆ ಕೃಷ್ಣಮಠ ಮತ್ತು ರಥ ಬೀದಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೊರ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ.

ಪ್ರಧಾನಿಯವರ ಸ್ವಾಗತಕ್ಕೆ ಕಟೌಟ್ ಗಳು, ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದ್ದು, ಉಡುಪಿ ನಗರ ಕೇಸರಿಮಯವಾಗಿದೆ. ಪ್ರಧಾನಿ ಮೋದಿ ಅವರು ಶ್ರೀ ಕೃಷ್ಣನ ದರ್ಶನ ಪಡೆದು ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ