Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಉಡುಪಿಗೆ ಪ್ರಧಾನಿ ಮೋದಿ

Advertisement
ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶುಕ್ರವಾರ ನಡೆಯುವ ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮೋದಿಯವರ ಆಗಮನಕ್ಕಾಗಿಯೇ ಆದಿ ಉಡುಪಿ ಮೈದಾನದಲ್ಲಿ ಹೆಚ್ಚುವರಿ ಹೆಲಿಪ್ಯಾಡ್ ಗಳನ್ನು ನಿರ್ಮಾಣ ಮಾಡಲಾಗಿದೆ.ಬುಧವಾರ ದೆಹಲಿಯಿಂದ ಆಗಮಿಸಿದ ವಾಯುಸೇನೆ ಅಧಿಕಾರಿಗಳು ಗುಣಮಟ್ಟ ಪರೀಕ್ಷಿಸಿದ್ದಾರೆ.

ನಂತರ ವಾಯು ಸೇನೆಯ ಮೂರು ಹೆಲಿಕಾಪ್ಟರ್ ಗಳು ಬಂದು ಉಡುಪಿ ಆಕಾಶದಲ್ಲಿ ಅನೇಕ ಬಾರಿ ಸುತ್ತು ಹೊಡೆದು ಹೆಲಿಪ್ಯಾಡ್ ಇಳಿಯುವ ಮತ್ತು ಟೆಕ್ ಆಫ್ ಮಾಡುವ ರಿಹರ್ಸಲ್ ನಡೆಸಿವೆ. ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ಸಾಗುವ ಆದಿ ಉಡುಪಿಯಿಂದ ಕೃಷ್ಣ ಮಠದವರೆಗಿನ ರಸ್ತೆ ಮತ್ತು ರೋಡ್ ಶೋ ನಡೆಸುವ ರಸ್ತೆಯಲ್ಲಿ ಗುರುವಾರ ರಿಹರ್ಸಲ್ ನಡೆಯಲಿದೆ.

ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರಿಗೆ ಕೃಷ್ಣಮಠ ಮತ್ತು ರಥ ಬೀದಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೊರ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ.

ಪ್ರಧಾನಿಯವರ ಸ್ವಾಗತಕ್ಕೆ ಕಟೌಟ್ ಗಳು, ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದ್ದು, ಉಡುಪಿ ನಗರ ಕೇಸರಿಮಯವಾಗಿದೆ. ಪ್ರಧಾನಿ ಮೋದಿ ಅವರು ಶ್ರೀ ಕೃಷ್ಣನ ದರ್ಶನ ಪಡೆದು ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ