Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಮಾಠಕಲ್ ಪೊಲೀಸ್ ಠಾಣೆಯಲ್ಲಿ ಲಂಚ ಬೇಡಿಕೆ ಪೊಲೀಸ್ ಸಿಬ್ಬಂದಿ ಅಮಾನತು

Advertisement
ಗುರುಮಾಠಕಲ್ : ಗುರುಮಾಠಕಲ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಾಹಿಸುತ್ತಿದ್ದ ಪೇದೆಗಳಿಬ್ಬರು ಭ್ರಷ್ಟಾಚಾರ ಆರೋಪದಡಿ ಅಮಾನತುಗೊಂಡ ಘಟನೆ ಜರುಗಿದೆ.

ಗುರುಮಠಕಲ್ ಠಾಣೆಯ ಎಎಸ್ಐ ಗೋಪಾಲರೆಡ್ಡಿ ಮತ್ತು ಕಾನ್ಸ್ಟೇಬಲ್ ವಿಶ್ವನಾಥರೆಡ್ಡಿ ಅವರನ್ನು ಇಲಾಖೆಯ ವಿಚಾರಣೆ ಕಾಯ್ದಿರಿಸಿ, ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಆದೇಶ ಹೊರಡಿಸಿದ್ದಾರೆ.

ಪ್ರಕಾರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರರಿಂದ ₹1ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಮುಂಗಡವಾಗಿ ತಲಾ ₹10 ಸಾವಿರ ಸ್ವೀಕರಿಸಿದ್ದಾರೆ ಎಂದು ಅಮಾನತುಗೊಂಡವರ ವಿರುದ್ಧ ಆರೋಪವಿದೆ.

ಜೂನ್ 24 ರಂದು ಪ್ರಕರಣ ಗುರುಮಾಠಕಲ್ ಪೊಲೀಸ್ ಠಾಣೆಯಲ್ಲಿ ದಾಖಲೆ ಯಾಗಿತ್ತು ಆದರೆ ಪ್ರಕರಣ ಆಗಸ್ಟ್ 05 ರಂದು ಇಬ್ಬರು ಪೊಲೀಸ್ ರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಆದೇಶ ಹೊರಡಿಸಿ ಅಮಾನತುಗೊಳಿಸಿದರೆ ಎಂದು ತಿಳಿದು ಬಂದಿದೆ.



ಗುರುಮಾಠಕಲ್ ತಾಲೂಕು ವ್ಯಪ್ತಿಯಲ್ಲಿ ಬರುವ ಮಿನಾಸಪುರ ಗ್ರಾಮದ ವೆಂಕಟರಡ್ಡಿ ಮತ್ತು ಅವರ ಮಗ ಹಣಮಂತರಡ್ಡಿ ಎಂಬುವವರ ಮೇಲೆ ಮೀನಾಸಾಪುರ ಗ್ರಾಮದ ಯಾದಯ್ಯ, ಮಲ್ಲಯ್ಯ, ಗೋಪಿ ಸೇರಿದಂತೆ ಐವರು ಮಾರಣಾಂತಿಕವಾಗಿ ಹೊಡೆದು ಕೈಕಾಲು ಮುರಿದಿದ್ದಾರೆ ಮತ್ತು ಜೀವ ಬೆದರಿಕೆ ಹಾಕಿರುವ ಕುರಿತು ಮೀನಾಸಪುರ ಗ್ರಾಮದ ಅನುಸೂಯಾ ವೆಂಕಟರೆಡ್ಡಿ ಎಂಬುವವರು ದೂರು ನೀಡಿದ್ದರು

ಆರೋಪಿಗಳನ್ನು ಬಂಧಿಸುವ ಕುರಿತು ವಿಚಾರಿಸಿದಾಗ, ದೂರುದರರಿಂದ ₹1 ಲಕ್ಷ ಬೇಡಿಕೆಯಿತ್ತಿದ್ದಾರೆ. ಫೋನ್ ಪೇ ಮೂಲಕ ವಿಶ್ವನಾಥರಡ್ಡಿ ₹10 ಸಾವಿರ ಹಾಗೂ ರಾಜೇಂದ್ರಬಾಬು ಎಂಬುವವರ ಮೊಬೈಲಗೆ ₹10 ಸಾವಿರ ಪೊನ್ ಪೆ ಮೂಲಕ ಪಡೆದಿದ್ದಾರೆ ಎಂದು ದೂರುದಾರೆ ಅನುಸೂಯ ಅವರು ಮೇಲಾಧಿಕಾರಿಗಳಿಗೆ ದೂರುನೀಡಿದ್ದರು. ಅನುಸೂಯ ಅವರು ನೀಡಿದ ದುರಿನ ಕುರಿತು DYSP ಸುರೇಶ್ ಅವರು ವಿಚಾರಣೆ ನಡೆಸಿ ಎಸ್ ಪಿ ಅವರಿಗೆ ವರದಿ ಸಲ್ಲಿಸಿದರು
ದೂರಿನ್ವಯ ತನಿಖೆಗೆ ಆದೇಶಿಸಿದಾಗ ಇದನ್ನು ತನಿಖೆ ಮಾಡಿದ ಡಿವೈಎಸ್ ಪಿ ಅವರು ನೀಡಿದ ವರದಿ ಅದಾರ ಮೇಲೆ ವರದಿ ಮಾಡಲಾಗಿದೆ.

ವರದಿ : ರವಿ ಬುರನೋಳ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ