LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಡತನ ನಿರ್ಮೂಲನೆ: ಭಾರತದಲ್ಲಿ ಗಮನಾರ್ಹ ಪ್ರಗತಿ

Advertisement
ನವದೆಹಲಿಭಾರತದಲ್ಲಿ ಬಡತನವು ಕಡಿಮೆಯಾಗುತ್ತಿದೆ ಎಂಬ ಸಿಹಿ ಸುದ್ದಿ ಹೊರಬಿದ್ದಿದೆ. 2024ರಲ್ಲಿ ಈ ಪ್ರಮಾಣ ಶೇ 4.6ಕ್ಕೆ ಇಳಿಕೆಯಾಗಿರುವ ಸಾಧ್ಯತೆ ಇದೆ ಎಂದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚಿನ ವರದಿ ಅಂದಾಜಿಸಿದೆ.

2023 ರಲ್ಲಿ ವಿಶ್ವಬ್ಯಾಂಕ್ ಅಂದಾಜು ಮಾಡಿದ್ದ ಶೇಕಡಾ 5.3 ರ ಬಡತನದ ದರಕ್ಕಿಂತ ಗಮನಾರ್ಹ ಸುಧಾರಣೆ ಕಂಡು ಬಂದಿದೆ. ವಿಶ್ವಬ್ಯಾಂಕ್​ ಮತ್ತು ಎಸ್​ಬಿಐನ ಬಡತನದ ಅಂದಾಜುಗಳಲ್ಲಿ ಗಮನಾರ್ಹ ಇಳಿಕೆ ಕಂಡಿರುವುದು ಗೊತ್ತಾಗಿದೆ. ವಿಶ್ವಬ್ಯಾಂಕ್​ ಅಂದಾಜಿಸಿದಂತೆ ಭಾರತದಲ್ಲಿ ಬಡತನ ಪ್ರಮಾಣ 2023ರಲ್ಲಿದ್ದ ಶೇ 5.3ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿಸಿತ್ತು.

ಭಾರತವು ಬಡತನ ಕಡಿಮೆ ಮಾಡುವಲ್ಲಿ ಗಮನಾರ್ಹ ಪ್ರಗತಿ ಕಂಡಿದೆ. ಅಲ್ಲದೇ, ಇತ್ತೀಚಿನ ಅಂದಾಜಿನ ಪ್ರಕಾರ ವಿಶ್ವಬ್ಯಾಂಕ್‌ನ ಮೌಲ್ಯಮಾಪನಕ್ಕಿಂತ ಈ ಪ್ರಮಾಣ ಮತ್ತಷ್ಟು ಕುಸಿತ ಕಂಡುಬಂದಿದೆ ಎಂದು ವರದಿ ತಿಳಿಸಿದೆ.

ಈ ವರದಿಯಲ್ಲಿ ಬಡತನದಲ್ಲಿನ ಇಳಿಕೆಗೆ ದತ್ತಾಂಶ ಸಂಗ್ರಹಣೆಯ ಹೊಸ ವಿಧಾನಗಳು ಮತ್ತು ನವೀಕರಿಸಿದ ವ್ಯಾಖ್ಯಾನಗಳು ಹೆಚ್ಚಿನ ಬೆಂಬಲವನ್ನು ನೀಡಿವೆ. ಭಾರತದ ಇತ್ತೀಚಿನ ಗೃಹಬಳಕೆ ವೆಚ್ಚ ಸಮೀಕ್ಷೆಗೆ ಹಳೆಯ ಏಕರೂಪ ಉಲ್ಲೇಖ ಅವಧಿ ಬದಲಿಗೆ ಮಾರ್ಪಡಿಸಿದ ಮಿಶ್ರ ಮರುಸ್ಥಾಪನೆ ಅವಧಿ ವಿಧಾನವನ್ನು ಅಳವಡಿಸಿಕೊಂಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ