ನವದೆಹಲಿ: ಕರ್ನಾಟಕದ ನೂತನಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೇಶದ ರಾಜಧಾನಿ ದೆಹಲಿಗೆ ಪ್ರವಾಸ ಕೈಗೊಂಡಿರುವ ಡಿ.ಕೆ. ಶಿವಕುಮಾರ್ ಅವರು ಗಣ್ಯಾತಿಗಣ್ಯರ ಭೇಟಿಯನ್ನು ಮುಂದುವರಿಸಿದ್ದಾರೆ.
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಅವರು, ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸೌಜನ್ಯದ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯಾದ ಬಳಿಕ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ಒಂದು ಸಾಂಪ್ರದಾಯಿಕ ಶಿಷ್ಟಾಚಾರವಾಗಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ.ಕೆ. ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ, ರಾಜ್ಯದ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು. ಸಿಎಂ ಡಿ.ಕೆ. ಶಿವಕುಮಾರ್ ಅವರು ಕೂಡ ರಾಷ್ಟ್ರಪತಿಗಳಿಗೆ ಗೌರವ ಪೂರ್ವಕವಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

